ಮಂಡ್ಯ:- ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭದಲ್ಲಿ ನಡೆದ ಗಲಾಟೆ ಬಗ್ಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಗ್ಯಾರಂಟಿ ಎಫೆಕ್ಟ್: ಸರ್ಕಾರದ ಖಜಾನೆ ಖಾಲಿ, ಆಸ್ತಿಗಳ ನಗದೀಕರಣಕ್ಕೆ ನಿರ್ಧಾರ!
ಇದುವರೆಗೂ ಘಟನೆ ಸಂಬಂಧ 46 ಜನರನ್ನ ವಶಕ್ಕೆ ಪಡೆದಿದ್ದೇವೆ. ಕೆಲವು ಸಿಸಿಟಿವಿ ಕ್ಯಾಮರಾ ಪರಿಶೀಲನೆ ಕೂಡ ಮಾಡುತ್ತಿದ್ದೇವೆ. ಸದ್ಯಕ್ಕೆ ಪರಿಸ್ಥಿತಿ ಹತೋಟಿಗೆ ಬಂದಿದೆ ಎಂದಿದ್ದಾರೆ.
ಮೆರವಣಿಗೆಗೆ ಅನುಮತಿ ನೀಡಿದ್ದೆವು. ನಾವು ಭದ್ರತೆ ಕೂಡ ಕಲ್ಪಿಸಿದ್ದೆವು. ಮಸೀದಿ ಬಳಿ ಮೂರ್ತಿ ನಿಲ್ಲಿಸಿ ಸಮಯ ಕಳೆಯುತ್ತಿದ್ದರು. ಹೀಗಾಗಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಎರಡೂ ಕಡೆಯವರು ಕಲ್ಲು ತೂರಾಟ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.