ಬೆಂಗಳೂರು: ಜ್ಯುವೆಲ್ಲರಿ ಅಸೋಸಿಯೇಷನ್ ವತಿಯಿಂದ ಕೇಂದ್ರ ಸರಕಾರದ ಭಾರೀ ಕೈಗಾರಿಕೆ, ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಯವರನ್ನು ಕರ್ನಾಟಕ ಜ್ಯುವೆಲರಿ ಅಸೋಸಿಯೇಷನ್ ಅಧ್ಯಕ್ಷರಾದ ಟಿ. ಎ. ಶರವಣ ಅವರು ಭೇಟಿ ಮಾಡಿದರು.
ಇಂದು ಕೇಂದ್ರ ಸರಕಾರದ ಭಾರೀ ಕೈಗಾರಿಕೆ, ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಯವರನ್ನು ಜ್ಯುವೆಲರಿ ಅಸೋಸಿಯೇಷನ್ ಪ್ರತಿನಿಧಿಸಿ ಕರ್ನಾಟಕ ಜ್ಯುವೆಲರಿ ಅಸೋಸಿಯೇಷನ್ ಅಧ್ಯಕ್ಷರಾದ ಟಿ. ಎ. ಶರವಣ ಅವರ ನೇತೃತ್ವದಲ್ಲಿ ದೆಹಲಿಯ ಕಛೇರಿಯಲ್ಲಿ ಭೇಟಿ ಮಾಡಿದರು.
ಈ ವೇಳೆ ಅವರಿಗೆ ಎಚ್ ಡಿ ಕುಮಾರಸ್ವಾಮಿ ಅವರಿಗೆ ಶುಭಾಶಯ ತಿಳಿಸಿ ಆಭರಣ ಉದ್ಯಮಕ್ಕೆ ನೀಡುವಂತೆ ಕೋರಿಕೊಂಡರು. ಈ ವೇಳೆ ಮಾತನಾಡಿದ ಎಂಎಲ್ಸಿ ಹಾಗೂ ಕರ್ನಾಟಕ ಜ್ಯುವೆಲ್ಲರಿ ಅಸೋಸಿಯೇಷನ್ ಅಧ್ಯಕ್ಷ ಡಾ. ಟಿ.ಎ. ಶರವಣ ಅವರು, ಬಂಗಾರದ ಮೇಲೆ ಹೂಡಿಕೆ ಮಾಡಿದರೆ ಅದು ಆಪದ್ಧನವಾಗುತ್ತದೆ. ಭಾರತೀಯರ ಪಾಲಿಗೆ ಬಂಗಾರ ಎಂದರೆ ಕೇವಲ ಹಳದಿ ಲೋಹವಲ್ಲ, ಅದು ನಮ್ಮ ಸಂಸ್ಕೃತಿ, ಸಂಪ್ರದಾಯ ಮತ್ತು ಘನತೆಯ ಪ್ರತೀಕ. ಕಷ್ಟಕಾಲದಲ್ಲಿ ತಕ್ಷಣಕ್ಕೆ ನಗದು ರೂಪದಲ್ಲಿ ಪರಿವರ್ತಿತಗೊಳ್ಳಬಲ್ಲ ಏಕೈಕ ವಸ್ತು ಎಂದು ಹೇಳಿದರು.
ಸಾಮಾನ್ಯವಾಗಿ ದುಬೈನಲ್ಲಿ ನಡೆಯುವ ದುಬೈ ಗೋಲ್ಡ್ ಫೆಸ್ಟಿವಲ್ ಮಾದರಿಯಲ್ಲಿ ಬೆಂಗಳೂರು ಗೋಲ್ಡ್ ಫೆಸ್ಟಿವಲ್ ನಡೆಸಲಾಗುತ್ತಿದ್ದು ಈ ಬಾರಿ ಎರಡನೇ ಆವೃತ್ತಿಯ ಬಂಗಾರದ ಹಬ್ಬ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ರಾಜ್ಯದ ಹಲವು ಜಿಲ್ಲೆಗಳಿಗೂ ವಿಸ್ತರಿಸಿದೆ. ಈ ಬಾರಿಯ ಬಂಪರ್ ಬಹುಮಾನ ಸಹ ಅತ್ಯಂತ ಆಕರ್ಷಕವಾಗಿದೆ, ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಈ ಸ್ವರ್ಣೋತ್ಸವದಲ್ಲಿ ಭಾಗಿಯಾಗುವಂತೆ ಮನವಿ ಮಾಡಿದರು.