ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆ ಗ್ರಾಮ ಪಂಚಾಯಿತಿ ಕಾರ್ಯಾಲಯ ಮುಂಭಾಗ ಬೂದಿಗೆರೆ ಯುವಕ ಪ್ರತಾಪ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಬೂದಿಗೆರೆ ಗ್ರಾಮ ಪಂಚಾಯಿತಿಯ ವಾಣಿಜ್ಯ ಮಳಿಗೆಗಳ ಹರಾಜು ಮಾಡಬೇಕೆಂದು ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಬಿಜೆಪಿಯಲ್ಲಿ ಎಲ್ಲಾ ಸರಿ ಹೋದ್ರೆ ಖಂಡಿತ ಮರಳಿ ಪಕ್ಷಕ್ಕೆ ಸೇರುತ್ತೇನೆ: ಈಶ್ವರಪ್ಪ!
ಕಳೆದ 20 ವರ್ಷಕ್ಕಿಂತ ಅಧಿಕ ಕಾಲದಿಂದಲೂ ಬೂದಿಗೆರೆ ಗ್ರಾಮ ಪಂಚಾಯಿತಿಯ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆ ನಡೆದಿಲ್ಲ ಜೊತೆಗೆ ವಾಣಿಜ್ಯ ಮಳಿಗೆಗಳ ಬಾಡಿಗೆ ಸಹ ವಸೂಲಿ ಆಗಿಲ್ಲ. ಇದ್ರಿಂದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಕುಂಠಿತ ಆಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹರಾಜು ಪ್ರಕ್ರಿಯೆ ಮೂಂದೂಡಿಕೆ
ಬೂದಿಗೆರೆ ಗ್ರಾಮ ಪಂಚಾಯಿತಿಯ ಒಟ್ಟು 40 ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆ ಇದೇ ತಿಂಗಳು 9 ರಂದು ನಿಗದಿ ಮಾಡಲಾಗಿತ್ತು. ಆದರೆ ಹರಾಜು ಪ್ರಕ್ರಿಯೆ ದಿನದಂದು ಗ್ರಾಮದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ವಾಣಿಜ್ಯ ಮಳಿಗೆಗಳಲ್ಲಿ ಮೀಸಲಾತಿ ನೀಡಿಲ್ಲ ಎಂದು ಹರಾಜು ಪ್ರಕ್ರಿಯೆ ಸ್ಥಗಿತ ಆಯಿತು. ಇದ್ರಿಂದ ಹರಾಜು ಪ್ರಕ್ರಿಯೆಯನ್ನು ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮುಂದೂಡಿಕೆ ಮಾಡಿದರು.
ಇನ್ನೂ ಈ ಬಗ್ಗೆ ಮಾತನಾಡಿದ ಧರಣಿ ನಿರತ ಯುವಕ ಪ್ರತಾಪ್, ಬೂದಿಗೆರೆ ಗ್ರಾಮ ಪಂಚಾಯಿತಿಯ ವಾಣಿಜ್ಯ ಮಳಿಗೆಗಳ ಒಟ್ಟು 40 ಅಂಗಡಿಗಳ ಹರಾಜು ಪ್ರಕ್ರಿಯೆಗೆ ದಿನಾಂಕ ನಿಗದಿ ಮಾಡಿ ಮುಂದೂಡಿಕೆ ಮಾಡಿರುವುದು ಸರಿಯಿಲ್ಲ. ಇನ್ನೂ ವಾಣಿಜ್ಯ ಮಳಿಗೆಗಳಿಗೆ ಸಾಕಷ್ಟು ವರ್ಷಗಳಿಂದ ಹರಾಜು ನಡೆದಿಲ್ಲ. ನಿಯಮದ ಪ್ರಕಾರ ಆಗಾಗ್ಗೆ ಹರಾಜು ಪ್ರಕ್ರಿಯೆ ನಡೆಸಬೇಕು.ಆದರೆ ಬೂದಿಗೆರೆ ಗ್ರಾಮ ಪಂಚಾಯಿತಿ ವಾಣಿಜ್ಯ ಮಳಿಗೆಗಳಿಗೆ ಇಲ್ಲಿಯ ವರೆಗೆ ಹರಾಜು ಪ್ರಕ್ರಿಯೆ ನಡೆದಿಲ್ಲ. ಇನ್ನೂ ವಾಣಿಜ್ಯ ಮಳಿಗೆಗಳಿಂದ ಲಕ್ಷಾಂತರ ರೂಪಾಯಿ ಬಾಡಿಗೆ ವಸೂಲಿ ಆಗಿಲ್ಲ. ಒಬ್ಬರು ಹರಾಜು ಪ್ರಕ್ರಿಯೆಯಲ್ಲಿ ವಾಣಿಜ್ಯ ಮಳಿಗೆಗಳನ್ನು ತೆಗೆದುಕೊಂಡು ಮತ್ತೊಬ್ಬರಿಗೆ ಹೆಚ್ಚಿನ ಬಾಡಿಗೆ ನೀಡಿ ಲಾಭ ಮಾಡಿಕೊಳ್ಳುತ್ತಿದ್ದಾರೆ. ಹರಾಜು ಪ್ರಕ್ರಿಯೆ ನಡೆಯುವ ವರೆಗೆ ಉಪವಾಸ ಸತ್ಯಾಗ್ರಹ ಕೈ ಬಿಡುವುದಿಲ್ಲ ಎಂದು ತಿಳಿಸಿದರು. ಇನ್ನೂ ಈಗಾಗಲೇ ಒಂದು ಬಾರಿ ಹರಾಜು ಪ್ರಕ್ರಿಯೆಗೆ ದಿನಾಂಕ ನಿಗದಿ ಮಾಡಿರುವ ಹಿನ್ನೆಲೆಯಲ್ಲಿ ಒಟ್ಟು 40 ವಾಣಿಜ್ಯ ಮಳಿಗೆಗಳಿಗೆ ನೂರಕ್ಕೂ ಅಧಿಕ ಸಾರ್ವಜನಿಕರು ಬೂದಿಗೆರೆ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಸಾವಿರಾರು ರೂಪಾಯಿ ಡಿಡಿ ಪಾವತಿ ಮಾಡಿದ್ದಾರೆ. ಆದರೂ ಹರಾಜು ಪ್ರಕ್ರಿಯೆ ನಡೆಸಿಲ್ಲ ಎಂದು ಗ್ರಾಮ ಪಂಚಾಯಿತಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.