ಬೆಳಗಾವಿ;– ದೂದ್ ಸಾಗರ್ ರೈಲು ಹಳಿ ತಪ್ಪಿದ ಹಿನ್ನೆಲೆ ಮಾರ್ಗ ಬದಲು ಮಾಡಲಾಗಿದೆ. ಬಳ್ಳಾರಿಗೆ ಕಲ್ಲಿದ್ದಲು ತುಂಬಿಕೊಂಡು ತೆರಳುತ್ತಿದ್ದ ಗೂಡ್ಸ್ ರೈಲಿನ ವ್ಯಾಗನ್ ಗುರುವಾರ ಮಧ್ಯಾಹ್ನ ದೂದ್ ಸಾಗರ್ ಬಳಿ ಹಳಿತಪ್ಪಿದ್ದು, ಕೆಲವು ರೈಲುಗಳು ಮಾರ್ಗ ಬದಲಾವಣೆ ಮಾಡಲಾಗಿದೆ. ಇನ್ನು ಕೆಲವೊಂದನ್ನು ಸ್ಥಗಿತಗೊಳಿಸಲಾಗಿದೆ.
ಬೂದಿಗೆರೆ ಪಂಚಾಯತಿ ಮಳಿಗೆಗಳ ಹರಾಜು ಪ್ರಕ್ರಿಯೆಗೆ ಒತ್ತಾಯ: ಉಪವಾಸ ಸತ್ಯಾಗ್ರಹ ಕೈಗೊಂಡ ಯುವಕ!
ಹುಬ್ಬಳ್ಳಿ ವಿಭಾಗದ ಸೋನಾಲಿಯಂ ಮತ್ತು ದೂದ್ ಸಾಗರ ನಿಲ್ದಾಣಗಳ ನಡುವೆ ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಗೂಡ್ಸ್ ರೈಲಿನ ವ್ಯಾಗನ್ ಹಳಿತಪ್ಪಿದೆ.
ಘಟನೆಯಿಂದಾಗಿ ಮಧ್ಯಾಹ್ನ ಗೋವಾಗೆ ತೆರಳುತ್ತಿದ್ದ ಅಮರಾವತಿ ಎಕ್ಸ್ಪ್ರೆಸ್ ರೈಲು ಕರಂಜೋಳ್ವರೆಗೆ ತೆರಳಿ ಪುನಃ ಲೋಂಡಾವರೆಗೆ ವಾಪಸ್ ತಂದು ಪ್ರಯಾಣಿಕರನ್ನು ಅಲ್ಲಿಯೇ ಬಿಟ್ಟು ಬಸ್ ಮೂಲಕ ತೆರಳಲು ವ್ಯವಸ್ಥೆ ಮಾಡಿದೆ ಎನ್ನಲಾಗಿದೆ.
ಇನ್ನು ರೈಲು ಸಂಖ್ಯೆ 12779 ವಾಸ್ಕೋ ಡ ಗಾಮಾ – ಹಜರತ್ ನಿಜಾಮುದ್ದೀನ್ ಎಕ್ಸ್ಪ್ರೆಸ್ ಪ್ರಯಾಣವನ್ನು ಮಡಗಾಂವ್, ರೋಹಾ, ಪನ್ವೆಲ್, ಪುಣೆ, ದೌಂಡ್ ಕಾರ್ಡ್ ಲೈನ್ ಮತ್ತು ಮನ್ಮಾಡ್ ನಿಲ್ದಾಣಗಳ ಮೂಲಕ ತಿರುಗಿಸಲಾಗಿದೆ.
18048 ವಾಸ್ಕೋ ಡ ಗಾಮಾ- ಶಾಲಿಮಾರ್ ಎಕ್ಸ್ಪ್ರೆಸ್ ಪ್ರಯಾಣವು ವಾಸ್ಕೋ ಡ ಗಾಮಾ ಬದಲಿಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಡಲಿದ್ದು, ವಾಸ್ಕೋ ಡ ಗಾಮಾ – ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ.