ಮೈಸೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಲೆದಂಡ ಖಚಿತ ಎಂದು ಪ್ರತಾಪ್ ಸಿಂಹ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಸರ್ಕಾರವೇ ನೇರ ಹೊಣೆಯಾಗಲಿದೆ ಎಂದರು.
ಬೇರೆ ಜಿಲ್ಲೆಗಳಲ್ಲಿ ಅದ್ದೂರಿಯಾಗಿ ಗಣೇಶ ಮೆರವಣಿಗೆಗಳು ನಡೆಯುತ್ತವೆ. ಅಷ್ಟರೊಳಗೆ ಸರ್ಕಾರ ಮುಸ್ಲಿಂ ಪುಂಡರ ಮೇಲೆ ನಿಯಂತ್ರಣ ಹೇರಬೇಕು. ನಿಯಂತ್ರಣ ಹೇರದಿದ್ದರೆ ನಮ್ಮ ರಕ್ಷಣೆ ಜವಾಬ್ದಾರಿ ನಮಗೆ ಗೊತ್ತಿದೆ ಎಂದು ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದಾರೆ.
ಈ ಮನೆಮದ್ದು ಬಳಸಿದ್ರೆ ಆಮೇಲೆ ಮನೆಯಲ್ಲಿ, ಒಂದೂ ಹಲ್ಲಿಗಳು ಇರಲ್ಲ ನೋಡಿ!
ಮಂಡ್ಯದ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ಮೇಲೆ ನಡೆದ ಕಲ್ಲು ತೂರಾಟ ಹಾಗೂ ನಂತರದ ಗಲಭೆಯ ಬೆನ್ನಲ್ಲೇ ಪ್ರತಾಪ್ ಸಿಂಹ ಈ ಹೇಳಿಕೆ ನೀಡಿದ್ದಾರೆ.
ಇನ್ನೂ ಮುಡಾ ಹಗರಣ ವಿಚಾರ ಕೋರ್ಟ್ನಲ್ಲಿದೆ. ಆ ಕೇಸ್ ವಿಚಾರ ಏನೇ ಆಗಲಿ ಅದು ಬೇರೆ ವಿಚಾರ. ಆದರೆ, ವಾಲ್ಮೀಕಿ ಹಗರಣದಲ್ಲಿ ಸಿಎಂ ತಲೆದಂಡ ನಿಶ್ಚಿತ. ಅರ್ಥಿಕ ಹಗರಣ ಆದಾಗ ಅದಕ್ಕೆ ಅರ್ಥಿಕ ಸಚಿವರೇ ಹೊಣೆಗಾರರು. ಸಿಎಂ ಅವರೇ 88 ಕೋಟಿ ರೂಪಾಯಿ ಅವ್ಯವಹಾರ ಆಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದರು.