ರಾಮನಗರ: ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ ಮೇಲೆ ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲ ಎಂದು ವಿರೋಧ ಪಕ್ಷದವರು ಆರೋಪಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ರಾಜ್ಯದ ಸುಮಾರು 1.20 ಲಕ್ಷ ಕುಟುಂಬಗಳಿಗೆ ವಾರ್ಷಿಕವಾಗಿ 50 ರಿಂದ 60 ಸಾವಿರ ರೂ.ಗಳ ಆರ್ಥಿಕ ಸಹಾಯವನ್ನು ಗ್ಯಾರಂಟಿಗಳ ಮೂಲಕ ಒದಗಿಸಲಾಗುತ್ತಿದೆ.
ಹಾಗಾದರೆ ಅಭಿವೃದ್ಧಿ ಕೆಲಸಗಳಿಗೆ 120 ಕೋಟಿ ರೂ.ಗಳನ್ನು ಅನುದಾನವನ್ನು ಏಕೆ ಮೀಸಲಿಡಲಾಗಿದೆ ಎಂದು ಪ್ರಶ್ನಿಸಿದರು. ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಾರೆ ಎಂದರು. ಹಾಲಿಗೆ ಬೆಲೆಏರಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದರು, ರೈತರಿಗೆ ಹಣ ಸೇರಬೇಡವೇ? ರೈತರಿಗೆ ಇದನ್ನು ಪ್ರಶ್ನಿಸಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದರು. ಹಾಲಿಗೆ 5.೦೦ ರೂ.ಗಳ ಪ್ರೋತ್ಸಾಹಧನ ಘೋಷಿಸಿದ್ದು ನಮ್ಮ ಸರ್ಕಾರ. ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದು ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ. ಏನೂ ಮಾಡದೇ ರೈತರ ಮಕ್ಕಳು ,ಮಣ್ಣಿನ ಮಕ್ಕಳು ಎನ್ನುತ್ತಾರೆ. ಅಭಿವೃದ್ಧಿಗಾಗಿ ಮೀಸಲಿಡಲಾಗಿದೆ ಎಂದರು.
ನಿಮ್ಮ ಕಣ್ಣುಗಳಲ್ಲೇ ಅಡಗಿದೆ ನಿಮ್ಮ ಆರೋಗ್ಯದ ಗುಟ್ಟು: ಕಣ್ಣಿನ ಮೇಲೆ ಮಧುಮೇಹದ ಪ್ರಭಾವವೇನು ಗೊತ್ತಾ..?
ನರೇಂದ್ರ ಮೋದಿ ಸುಳ್ಳು ಹೇಳುತ್ತಾರೆ ಎಂದು ಈ ಬಾರಿ ಮೋದಿಯವರಿಗ ವೋಟು ನೀಡಲಾಗಿದೆಯೇ ಎಂದು ಪ್ರಶ್ನಿಸಿದ್ದಾರೆ. ಭಾರತದ ಮೇಲಿನ ಸಾಲ 182 ಲಕ್ಷ ಕೋಟಿಯನ್ನು ಮೀರುತ್ತಿದೆ. ಹಿಂದೆ ಸಾಲದ ಮೊತ್ತ 53.11 ಲಕ್ಷ ಕೋಟಿ ಇದ್ದ ಸಾಲದ ಮೊತ್ತ ಈಗ ಕಳೆದ 10 ವರ್ಷದಲ್ಲಿ 182 ಲಕ್ಷ ಕೋಟಿ ರೂ.ಗೆ ತಲುಪಿದೆ. ಗರೀಬಿ ಹಠಾವೋ, ಆಹಾರಸ್ವಾವಲಂಬನೆಯಂತ ಜನಪರ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪಕ್ಷ ದೇಶಕ್ಕೆ ಕೊಟ್ಟಿದೆ ಎಂದರು.