ಕೋಲಾರ: ಜನತಾ ನ್ಯಾಯಾಲದಲ್ಲಿ ಪ್ರಕರಣಗಳು ಶೀಘ್ರವಾಗಿ ವಿಲೇವಾರಿಯಾಗುತ್ತಿದ್ದು ನ್ಯಾಯಾಲಯದಲ್ಲಿ ನೀಡುವ ತೀರ್ಪು ಅಂತಿಮವಾಗಿದ್ದು , ಯಾವುದೇ ನ್ಯಾಯಾಲಯದಲ್ಲಿ ತೀರ್ಪನ್ನು ಪ್ರಶ್ನಿಸುವ ಅವಕಾಶವಿಲ್ಲ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ. ಎ ಮಂಜುನಾಥ್ ಅವರು ತಿಳಿಸಿದರು .
Narendra Modi:ಕರ್ನಾಟಕ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ!
ಇಂದು ಜಿಲ್ಲಾ ನ್ಯಾಯಾಲಯ ಸಂಕೀರ್ಣ ಆವರಣದಲ್ಲಿ ಹಮ್ಮಿಕೊಂಡಿದ್ದ ಜನತಾ ನ್ಯಾಯಾಲಯದ ಸಂಧಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಇಂದು ಲೋಕ ಅದಾಲತ್ನ್ನು ಹಮ್ಮಿಕೊಂಡಿದ್ದು , ಸಂಧಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು .
ಜನತಾ ನ್ಯಾಯಾಲಯದಲ್ಲಿ ನ್ಯಾಯಾಧೀಶರು ಮತ್ತು ವಕೀಲರು ಸಂಧಾನಕಾರರಾಗಿರುತ್ತಾರೆ . ಕಕ್ಷಿದಾರರ ನಡುವೆ ಮಾತುಕತೆ ನಡೆಸಿ ಅವರ ಮನವೊಲಿಸಿ ಯಾವುದೇ ವಿವಾದಕ್ಕೆ ಪರಿಹಾರ ಕಂಡುಕೊಳ್ಳುವ ಸಂದರ್ಭವನ್ನು ಸೃಷ್ಟಿ ಮಾಡಲಾಗುತ್ತಿದೆ . ಕಳೆದ ಅದಾಲತ್ ನಲ್ಲಿ ಹೆಚ್ಚಿನ ಪ್ರಕರಣಗಳನ್ನು ಸಂಧಾನದಲ್ಲಿ ತೀರ್ಮಾನ ಮಾಡಿ ಯಶಸ್ವಿ ಕಾಣಲಾಗಿದೆ. ಜಿಲ್ಲೆಯ ಕಕ್ಷಿದಾರರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು .
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಮಾನತೆ ಹಕ್ಕನ್ನು ಸಾಧರಪಡಿಸಿಕೊಳ್ಳಲು ವಿವಾದಗಳು ವೇಗವಾಗಿ ತೀರ್ಮಾನಗೊಂಡು ಅವರ ಹಕ್ಕನ್ನು ಬೇಗ ಪಡೆದುಕೊಂಡರೆ ಸರ್ವರಿಗೂ ಸಮಬಾಳು ಎಂಬ ಪ್ರಜಾಪ್ರಭುತ್ವದ ಬುನಾದಿಯ ಉದ್ದೇಶವನ್ನು ಈಡೇರಿಸಿದಂತೆ ಆಗುತ್ತದೆ ಎಂದು ಅವರು ಹೇಳಿದರು.
ಜನತಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುನಿಲ್ ಎಸ್ ಹೊಸಮನಿ ಅವರು ಮಾತನಾಡಿ ಅತಿ ಹೆಚ್ಚು ಪ್ರಕರಣಗಳು ರಾಜೀ ಮೂಲಕ ಮುಕ್ತಾಯಗೊಂಡಿರುತ್ತವೆ. ಈ ಪೈಕಿ ಚಾಲ್ತಿಯಲ್ಲಿರುವ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಬ್ಯಾಂಕ್ ಪ್ರಕರಣಗಳು ಸೇರಿರುತ್ತವೆ. ಸದರಿ ರಾಜೀ ಪ್ರಕರಣಗಳಲ್ಲಿ ಪರಿಹಾರವಾಗಿ ಸ್ಥಳದಲ್ಲೇ ಪಾವತಿ ಮಾಡಲಾಗಿದೆ ಎಂದು ತಿಳಿಸಿದರು.
ಮುಖ್ಯವಾಗಿ ಚೆಕ್ ಅಮಾನ್ಯ ಪ್ರಕರಣಗಳು, ಕ್ರಿಮಿನಲ್ ಪ್ರಕರಣಗಳು, ವಿಭಾಗ ಪ್ರಕರಣಗಳು , ಮರಳು ಕಳ್ಳತನ ಪ್ರಕರಣಗಳು , ಸಿವಿಲ್ ಪ್ರಕರಣಗಳು ಹಾಗೂ ಮೋಟಾರ್ ಬೈಕ್ ಪ್ರಕರಣಗಳು ಇತ್ಯರ್ಥ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು . ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಮುನೇಗೌಡ ಅವರು ಮಾತನಾಡಿ ಪ್ರತಿಯೊಬ್ಬ ಕಕ್ಷಿದಾರರ ನಡುವಿನ ದ್ವೇಷವನ್ನು ಹೋಗಲಾಡಿಸಿ ಸಾಮರಸ್ಯದಿಂದ ಜೀವನ ನಡೆಸಲು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ನ್ಯಾಯಾಧಿಶರಾದ ಶ್ರೀಮತಿ ಬಿ.ಎಸ್.ಜಯಶ್ರೀ, ನಿರ್ಮಲಾ ದೇವಿ, ಪಿ ಕೆ. ದಿವ್ಯ, ಕೆ. ಬಿ. ಪ್ರಸಾದ್,ಶಕುಂತಲಾ, ಆರ್. ನಟೇಶ್, ರೆಹನಾ ಸುಲ್ತಾನ, ಶ್ರೀನಿವಾಸ್ ಪಾಟೀಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.