ಹುಬ್ಬಳ್ಳಿ: ಪುಣೆಯಿಂದ ಬೆಳಗಾವಿವರೆಗೆ ವಂದೇ ಭಾರತ್ ರೈಲು ಆರಂಭಿಸಬೇಕು ಎಂಬುದು ಈ ಭಾಗದ ಜನರ ಬೇಡಿಕೆಯಾಗಿತ್ತು. ಈಬಗ್ಗೆ ನಾನು ಸಂಸದನಾದ ನಂತರ ಕೇಂದ್ರ ರೈಲ್ವೆ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೆ. ಈಗ ವಂದೇ ಭಾರತ್ ರೈಲು ಆರಂಭಿಸಿರುವುದನ್ನು ಸ್ಬಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಬೆಂಗಳೂರು -ಧಾರವಾಡ ವಂದೇ ಭಾರತ್ ರೈಲನ್ನು ಬೆಳಗಾವಿಗೆ ವಿಸ್ತರಿಸುವಂತೆ ಸಹ ಮನವಿ ಮಾಡಲಾಗಿದೆ. ಈ ಬಗ್ಗೆಯೂ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಭರವಸೆ ನೀಡಿದ್ದಾರೆ. ರೈಲು ಸಂಚಾರ ಆರಂಭವಾದ ನಂತರ ವೇಳಾಪಟ್ಟಿಗೆ ಸಂಬಂಧಿಸಿದ ಗೊಂದಲಗಳನ್ನು ಪರಿಹರಿಸಲಾಗುವುದು ಎಂದು ಹೇಳಿದರು.
Headache: ಪದೇ ಪದೇ ತಲೆನೋವು ಕಾಡ್ತಿದ್ರೆ ಈ ಟಿಪ್ಸ್ ಫಾಲೋ ಮಾಡಿ ತಲೆನೋವು ಮಂಗಮಾಯವಾಗುತ್ತೆ!
ಕೊಲ್ಲಾಪುರಕ್ಕೂ ವಂದೇ ಭಾರತ್ ರೈಲು ಬರಬೇಕು ಎಂಬುದು ಅಲ್ಲಿನ ಜನರು, ರಾಜಕೀಯ ಮುಖಂಡರ ಬೇಡಿಕೆಯಾಗಿತ್ತು. ಹೀಗಾಗಿ ವಾರದಲ್ಲಿ ಮೂರು ದಿನ ಆ ಮಾರ್ಗವಾಗಿ ರೈಲು ಸಂಚರಿಸಲಿದೆ. ಮುಂದಿನ ದಿನಗಳಲ್ಲಿ ಈ ಹಿಂದೆ ನಿಗದಿ ಮಾಡಿದಂತೆ ವಾರದಲ್ಲಿ ಆರು ದಿನ ಹುಬ್ಬಳ್ಳಿ-ಪುಣೆ ನಡುವೆ ಸಂಚರಿಸುವ ವಿಶ್ವಾಸ ಇದೆ ಎಂದರು. ಮುಂದಿನ ದಿನಗಳಲ್ಲಿ ಟಿಕೆಟ್ ದರ ಕಡಿಮೆ ಮಾಡುವಂತೆ ಸಂಬಂಧಿಸಿದವರಿಗೆ ಮನವಿ ಮಾಡಲಾಗುವುದು ಎಂದು ಹೇಳಿದರು.