ಹುಬ್ಬಳ್ಳಿ; ಹುಬ್ಬಳ್ಳಿ ಧಾರವಾಡ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಗೈಡ್ ಲೈನ್ ಪ್ರಕಾರ ರಾತ್ರಿ 10 ಗಂಟೆವರೆಗೆ ಮಾತ್ರವೇ ಡಿಜೆಗೆ ಅನುಮತಿ ನೀಡಲಾಗಿದೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಕಮೀಷನರ್ ಎನ್.ಶಶಿಕುಮಾರ್ ಸ್ಪಷ್ಟನೆ ನೀಡಿದರು.
ಡಿಜೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಅವರು, ಯಾವುದೇ ರೀತಿಯಲ್ಲಿಯೂ ಅವಧಿ ವಿಸ್ತರಣೆ ಮಾಡಿಲ್ಲ. ಈಗಾಗಲೇ ಮಹಾಮಂಡಳಗಳು, ಸಾರ್ವಜನಿಕರು ಬೇಡಿಕೆ ಇಟ್ಟಿದ್ದರು. ಆದರೇ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಹತ್ತು ಗಂಟೆಗೆ ಎಲ್ಲಾ ಡಿಜೆ ಕಡ್ಡಾಯವಾಗಿ ಬಂದ್ ಮಾಡುವಂತೆ ಸೂಚನೆ ನೀಡಲಾಗಿದ್ದು, ಸಹಕರಿಸಿ ಎಂದರು.
BSNL 5G: BSNL ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್..! ಇದೇ ದಿನ BSNL 5G ಸೇವೆ ಆರಂಭ – ಇಲ್ಲಿದೆ ಮಾಹಿತಿ
ಇನ್ನೂ ಯಾವುದೇ ರೀತಿಯಲ್ಲಿ ಸಮಾಜಘಾತುಕ ಹಾಗೂ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸದರೇ ನಿರ್ದಾಕ್ಷಿಣ್ಯವಾಗಿ ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದರು.