ಬೆಂಗಳೂರು: ಜೆಡಿಎಸ್ ನಾಯಕರಿಗೆ ತಲೆನೋವಾದ ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಸಿಗುವ ವಿಶ್ವಾಸದಲ್ಲಿರುವ ಯೋಗೇಶ್ವರ್ ಇತ್ತ ಕ್ಷೇತ್ರವನ್ನು ತಮ್ಮ ಹಿಡಿತದಿಂದ ಬಿಟ್ಟುಕೊಡದೇ ಇರಬೇಕೆಂಬುದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಆಶಯ
ಹೀಗಾಗಿ MLC ಸಿ.ಪಿ.ಯೋಗೇಶ್ವರ್ ಮನವೊಲಿಕೆಗೆ JDS ಫ್ಲ್ಯಾನ್ CPYಗೆ ಕೇಂದ್ರದಲ್ಲಿ ನಿಗಮ ಮಂಡಳಿ ಸ್ಥಾನದ ಆಫರ್ ನೀಡಲು ಚಿಂತನೆ ನಡೆಸಿದ್ದು CP ಯೋಗೇಶ್ವರ್ ವಿಶ್ವಾಸಕ್ಕೆ ಪಡೆದು ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸಲು ತಂತ್ರ ನಡೆಯುತ್ತಿದೆ.
ಚನ್ನಪಟ್ಟಣ ಕ್ಷೇತ್ರವನ್ನು JDSಗೆ ಬಿಟ್ಟುಕೊಡುವ ಬಗ್ಗೆ ಮಾತುಕತೆ ವರಿಷ್ಠರ ಮಾತುಕತೆ ನಡುವ ಟಿಕೆಟ್ಗಾಗಿ ಯೋಗೇಶ್ವರ್ ಪ್ರಯತ್ನ ಹೀಗಾಗಿ MLC ಸಿ.ಪಿ.ಯೋಗೇಶ್ವರ್ ಮನವೊಲಿಕೆಗೆ JDS ಪ್ಲಾನ್ ಮಾಡಿದ್ದು ಚನ್ನಪಟ್ಟಣದಲ್ಲಿ JDS ಅಭ್ಯರ್ಥಿ ಗೆಲ್ಲಿಸಲು ಪಣತೊಟ್ಟಿರುವ HD ಕುಮಾರಸ್ವಾಮಿ.
ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಸಿಗುವ ವಿಶ್ವಾಸದಲ್ಲಿರುವ ಯೋಗೇಶ್ವರ್ ಅವರನ್ನು ಮನವೊಲಿಸಲು ಕುಮಾರಸ್ವಾಮಿ ಮುಂದಾಗಿದ್ದಾರೆ. ಸಿಪಿ ಯೋಗೇಶ್ವರ್ ಜತೆ ಮಾತುಕತೆ ನಡೆಸಿ ಅವರಿಗೆ ಕೇಂದ್ರದಲ್ಲಿ ನಿಗಮ ಮಂಡಳಿ ಸ್ಥಾನದ ಆಫರ್ ನೀಡಲು ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ. ಈ ಮೂಲಕ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸುವ ಯೋಚನೆ ಕುಮಾರಸ್ವಾಮಿಯವರದ್ದಾಗಿದೆ.
ಬಿಜೆಪಿ ವರಿಷ್ಠರ ಜತೆಗೆ ಯೋಗೇಶ್ವರ್ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಟಿಕೆಟ್ಗಾಗಿ ಪ್ರಯತ್ನಿಸುತ್ತಲೇ ಇದ್ದಾರೆ. ಈ ಸಂದರ್ಭದಲ್ಲಿ ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡುವ ಬಗ್ಗೆ ಬಿಜೆಪಿ ಹೈಕಮಾಂಡ್ ಜತೆ ಮಾತುಕತೆಗೆ ಕುಮಾರಸ್ವಾಮಿ ಮುಂದಾಗಿದ್ದಾರೆ. ಮತ್ತೊಂದೆಡೆ, ಕರ್ನಾಟಕ ಬಿಜೆಪಿ ನಾಯಕರ ಮೂಲಕ ಯೋಗೇಶ್ವರ್ ಮನವೊಲಿಕೆಗೂ ಜೆಡಿಎಸ್ ಪ್ಲ್ಯಾನ್ ಮಾಡಿದೆ.