ಚಿಕ್ಕಮಗಳೂರು: ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬನ ಮೇಲೆ ಬ್ಲೇಡ್ನಿಂದ ಹಲ್ಲೆ ನಡೆಸಿದ ಘಟನೆ ಗವನಗಳ್ಳಿಯಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಗೌತಮ್ (23) ಎಂದು ಗುರುತಿಸಲಾಗಿದೆ. ತಿಮ್ಮರಾಜ್ ಅರಸ್ ಎಂಬಾತ ಹಲ್ಲೆ ನಡೆಸಿದ್ದು, ಹಲ್ಲೆಗೊಳಗಾದ ಯುವಕನ ಕಿವಿ ಕತ್ತರಿಸಿ ಹೋಗಿದೆ. ಅಲ್ಲದೇ ಮುಖದಿಂದ ಕತ್ತಿನ ಭಾಗದವರೆಗೆ ತೀವ್ರ ಗಾಯವಾಗಿದೆ.
ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ, ಸಬ್ಸಿಡಿ ಎಷ್ಟು..?ಯಾರು ಅರ್ಜಿ ಸಲ್ಲಿಸಬಹುದು, ಮಾಹಿತಿ ಇಲ್ಲಿದೆ
ಗಣಪತಿ ವಿಸರ್ಜನೆ ವೇಳೆ ಕುಣಿಯುವ ವೇಳೆ ಗುಂಪಿನ ಮಧ್ಯೆ ತಳ್ಳಿದ್ದಕ್ಕೆ ಗಲಾಟೆ ನಡೆದಿದೆ. ಈ ವೇಳೆ ಯುವಕನ ಮುಖದ ಮೇಲೆ ಬ್ಲೇಡ್ನಿಂದ ಮನಸ್ಸೋ ಇಚ್ಛೆ ಹಲ್ಲೆ ನಡೆಸಲಾಗಿದೆ. ಗಾಯಾಳು ಗೌತಮ್ಗೆ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.