ಬೆಂಗಳೂರು: ಮದ್ಯಪಾನ ಮಾಡಿ ಶಾಲಾ ವಾಹನ ಚಲಾಯಿಸುತ್ತಿದ್ದವರ ವಿರುದ್ಧ ಇಂದು ಚಿಕ್ಕಬಾಣಾವರ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 8 ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಶಾಲಾ ವಾಹನ ಚಾಲಕರ ವಿರುದ್ಧ ಇತ್ತೀಚಿನ ದಿನಗಳಲ್ಲಿ ಕೆಲ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ
ಇಂದು ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ವಿಶೇಷ ಕಾರ್ಯಾಚರಣೆಯನ್ನು ಚಿಕ್ಕಬಾಣಾವರ ಟ್ರಾಫಿಕ್ ಪೋಲಿಸರಿಂದ ಹಮ್ಮಿಕೊಳ್ಳಲಾಗಿತ್ತು ಚಿಕ್ಕಬಾಣಾವಾರ ಟ್ರಾಪಿಕ್ ಪೋಲೀಸ್ ಇನ್ಸ್ಪೆಕ್ಟರ್ ಎಂ ಬಿ ರಾಘವೇಂದ್ರ ರವರ ನೇತ್ರತ್ವದಲ್ಲಿ ಕಾರ್ಯಚರಣೆ ಮಾಡಲಾಯಿತು.
ಶಾಲಾ ವಾಹನಗಳನ್ನು ತಪಾಸಣೆಗೊಳಪಡಿಸಲಾಗಿದೆ. ಈ ವೇಳೆ ಮಧ್ಯ ಸೇವಿಸಿ ಶಾಲಾ ವಾಹನ ಚಲಾಯಿಸುತ್ತಿದ್ದ 8 ಜನ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಲ್ಲದೇ ಚಾಲಕರ ಚಾಲನಾ ಪರವಾನಗಿಯನ್ನು ಅಮಾನತ್ತುಗೊಳಿಸುವಂತೆ ಸಂಬಂಧಪಟ್ಟ ಆರ್.ಟಿ.ಓ ಕಚೇರಿಗಳಿಗೆ ವರದಿ ನೀಡಲಾಗಿದೆ.
ಮಕ್ಕಳ ಸುರಕ್ಷತೆಯ ಸಂಭಂದ ಚಿಕ್ಕಬಾಣಾವರ ಟ್ರಾಫಿಕ್ ಪೋಲಿಸರಿಂದ ಶಿಕ್ಷಣ ಸಂಸ್ಥೆಗಳಲ್ಲಿ ಉಪನ್ಯಾಸ ನೀಡಿ ಶಾಲಾ ವಾಹನಗಳಲ್ಲಿ ಕಾರ್ಯ ನಿರ್ವಹಿಸುವ ಚಾಲಕರು ಹಾಗೂ ಸಹಾಯಕರಿಂದ ಮಕ್ಕಳ ಮೇಲೆ ದೌರ್ಜನ್ಯ ಆಗುತ್ತಿದೆ ಈ ಸಂಬಂಧ ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯಸ್ಥರಿಗೆ ಮಕ್ಕಳ ಸುರಕ್ಷತೆಯ ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಕ್ಯೆಗೊಳ್ಳಲಾಗುತ್ತದೆ ಎಂದು ತಿಳುವಳಿಕೆ ನೀಡಲಾಗುತ್ತಿದೆ.