ಧಾರವಾಡ: ಇಂದಿನಿಂದ (ಸೆ.21 ರಿಂದ 24)ರವರೆಗೆ ನಾಲ್ಕು ದಿನ ಧಾರವಾಡದ ಕೃಷಿ ವಿಶ್ವವಿದ್ಯಾಲಯ (ದ ಆವರಣದಲ್ಲಿ ನಡೆಯಲಿದೆ. ಕಳೆದ ಎರಡು ತಿಂಗಳಿಂದ ಈ ಮೇಳಕ್ಕಾಗಿ ಸಿದ್ಧತೆ ನಡೆದಿದೆ.ನಾಲ್ಕು ದಿನಗಳ ಕಾಲ ಆಯೋಜಿಸಿರುವ ಕೃಷಿ ಮೇಳದ ಮೂಲಕ ಅಲ್ಪ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ರೈತರಿಗೆ ಕೃಷಿ ತಂತ್ರಜ್ಞಾನಗಳನ್ನು ತಲುಪಿಸುವುದು ಮೇಳದ ಮುಖ್ಯ ಉದ್ದೇಶವಾಗಿದೆ. ಮೇಳದಲ್ಲಿ 15 ಲಕ್ಷಕ್ಕೂ ಹೆಚ್ಚು ರೈತರು ಭಾಗವಹಿಸುವ ನಿರೀಕ್ಷೆಯಿದೆ. ಮೊದಲ ಬಾರಿಗೆ ಕ್ಯೂಆರ್ ಕೋಡ್ ಮೂಲಕ ಮೂಲಕ ನೋಂದಣಿ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ.
ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆಗೆ ಸರಕಾರದ ನಿರ್ಲಕ್ಷ್ಯ: ಅರವಿಂದ ಬೆಲ್ಲದ ಆಕ್ರೋಶ
ಮೇಳದ ಪ್ರಮುಖ ಆಕರ್ಷಣೆ ಕೃಷಿ ವಸ್ತು ಪ್ರದರ್ಶನ. ಇದರಲ್ಲಿ 150 ಹೈಟೆಕ್ ಮಳಿಗೆ, 241 ಸಾಮಾನ್ಯ ಮಳಿಗೆ, 110 ಯಂತ್ರೋಪಕರಣ ಮಳಿಗೆ, 27 ಟ್ರ್ಯಾಕ್ಟರ್, ಭಾರಿ ಯಂತ್ರೋಪಕರಣಗಳ ಮಳಿಗೆ ಹಾಗೂ 28 ಆಹಾರ ಮಳಿಗೆಗಳು ಇರಲಿವೆ. ಹವಾಮಾನ ವೈಪರೀತ್ಯ ನಿರ್ವಹಣೆಯಲ್ಲಿ ಕೈಗೊಳ್ಳಬೇಕಾದ ಬೆಳೆ ಪದ್ಧತಿ ಹಾಗೂ ಕೃಷಿ ತಾಂತ್ರಿಕತೆಗಳು ಸಮಗ್ರ ಬೆಳೆ ನಿರ್ವಹಣೆ, ಜೈವಿಕ ಗೊಬ್ಬರ ಹಾಗೂ ಪೀಡೆನಾಶಕಗಳು, ಎಣ್ಣೆಕಾಳು, ದ್ವಿದಳ ಧಾನ್ಯಗಳು ಮತ್ತು ಹಿಂಗಾರು ಬೆಳೆಗಳ ತಾಂತ್ರಿಕತೆಗಳು, ಮಳೆ ನೀರು ಕೊಯ್ಲು ಮತ್ತು ಅಂತರ್ಜಲ ಮರುಪೂರಣ, ನೈಸರ್ಗಿಕ ಕೃಷಿ, ಸಾವಯವ ಕೃಷಿ ಮತ್ತು ಮಣ್ಣಿನ ಫಲವತ್ತತೆ ಸಂರಕ್ಷಣೆ, ಹೈಟೆಕ್ ತೋಟಗಾರಿಕೆ, ಫಲ-ಪುಷ್ಪ ಪ್ರದರ್ಶನ ಇರುತ್ತದೆ.