ಬೆಂಗಳೂರು: ದೇಶವನ್ನೇ ದಂಗು ಬಡಿಸಿದ್ದ ದೆಹಲಿಯ ಶ್ರದ್ಧಾ ಕೊಲೆ ಕೇಸ್ ಜನ ಮಾನಸದಿಂದ ಮಾಸುವ ಮುನ್ನವೇ ನಗರದಲ್ಲಿ ಅಂತಹದ್ದೇ ಡೆಡ್ಲಿ ಮರ್ಡರ್ ನಡೆದಿದೆ. 2022ರ ಮೇ.18ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂತಹದ್ದೇ ಹತ್ಯೆ ನಡೆದಿತ್ತು. ಶ್ರದ್ಧಾ ಅನ್ನೋ 26 ವರ್ಷದ ಯುವತಿಯನ್ನ ಪ್ರಿಯಕರ ಅಫ್ತಾಬ್ ಭೀಕರವಾಗಿ ಕೊಂದು ಮೃತದೇಹವನ್ನ ಫ್ರಿಡ್ಜ್ನಲ್ಲಿಟ್ಟಿದ್ದ.
Condoms Problems: ಲೈಂಗಿಕ ಕ್ರಿಯೆ ಸಮಯದಲ್ಲಿ ಕಾಂಡೋಮ್ ಹರಿದ್ರೆ ತಕ್ಷಣ ಹೀಗೆ ಮಾಡಿ..!
ರಾಷ್ಟ್ರ ರಾಜಧಾನಿಯ ಶ್ರದ್ಧಾ ಕೊಲೆ ಕೇಸ್ ಮಾಸುವ ಮುನ್ನವೇ ರಾಜ್ಯ ರಾಜಧಾನಿಯಲ್ಲಿ ಅಂತಹದ್ದೇ ಭೀಕರ ಕೊಲೆ ನಡೆದು ಹೋಗಿದೆ. 26 ವರ್ಷದ ಯುವತಿ 50ಕ್ಕೂ ಹೆಚ್ಚು ಪೀಸ್ ಆಗಿ ಹೋಗಿದ್ದಾಳೆ.ನಗರದ ವೈಯಾಲಿಕಾವಲ್ನ ಮುನೇಶ್ವರ ಬ್ಲಾಕ್ನಲ್ಲಿ ನಡೆದಿರುವ ಈ ಪ್ರಕರಣದಲ್ಲಿ ಒಂದೊಂದೇ ಸ್ಫೋಟಕ ವಿಚಾರಗಳು ಬೆಳಕಿಗೆ ಬರುತ್ತಿವೆ.
10 ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ಆಫ್:
ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಹತ್ತು ದಿನಗಳ ಹಿಂದೆಯೇ ಮಹಿಳೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಕೊಲೆಯಾದ ಮಹಾಲಕ್ಷ್ಮಿ ಕಳೆದ ಒಂದು ವಾರದಿಂದ ಕೆಲಸಕ್ಕೆ ಹೋಗಿಲ್ಲ. ವಾಸವಿರುವ ಮನೆಯ ಬಳಿಯೂ ಯಾರ ಕಣ್ಣಿಗೂ ಕಾಣಿಸಿಕೊಂಡಿಲ್ಲ. 10 ದಿನಗಳ ಹಿಂದೆಯೇ ಮಹಾಲಕ್ಷ್ಮಿ ಮೊಬೈಲ್ ಸಹ ಸ್ವಿಚ್ಆಫ್ ಆಗಿದೆ. ಹಾಗಾಗಿ 10 ದಿನಗಳ ಹಿಂದೆಯೇ ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ.
ಬೌರಿಂಗ್ ಆಸ್ಪತ್ರೆಯಲ್ಲಿಂದು ಮರೋಣತ್ತರ ಪರೀಕ್ಷೆ:
ಮಹಾಲಕ್ಷ್ಮಿ ಮೃತದೇಹ ತುಂಡುಗಳ ಮರಣೋತ್ತರ ಪರೀಕ್ಷೆ ಭಾನುವಾರ (ಇಂದು) ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ನಡೆಯಲಿದೆ. ಬೆಳಗ್ಗೆ ಪೋಸ್ಟ್ ಮಾರ್ಟಂ ಪ್ರಕ್ರಿಯೆ ಶುರುವಾಗಲಿದೆ.
ಹೇಗೆ ನಡೆಯುತ್ತೆ ಭೀಕರ ಕೊಲೆಯ ಪೋಸ್ಟ್ ಮಾರ್ಟಂ?
1 ಮೊದಲು ಪ್ರತಿ ಪೀಸ್ಗೂ ನಂಬರಿಂಗ್ ಮಾಡಲಾಗುತ್ತೆ
2 ಪ್ರತಿ ಪೀಸ್ಸ್ನ ರೆಡಿಯಾಲಿಜಿಕಲ್ ಎಕ್ಸಾಮೀನೇಶನ್ ಮಾಡಲಾಗುತ್ತೆ, ಸಿಟಿ ಸ್ಕ್ಯಾನ್ ಎಕ್ಸರೇ ಹೀಗೆ
3 ಆಯ್ದ ತುಂಡುಗಳ ಟಾಕ್ಸಿಕಲ್ ಎಕ್ಸಾಮಿನೇಷನ್ ಮಾಡಲಾಗುತ್ತೆ
4 ಆಯ್ದ ತುಂಡುಗಳ ಪ್ಯಾಥಾಲಿಜಿಕಲ್ ಎಕ್ಸಾಮಿನೇಷನ್ ಮಾಡಲಾಗುತ್ತೆ
5 DNA ಪರೀಕ್ಷೆ ಮಾಡಲಾಗುತ್ತೆ
6 ಅವಶ್ಯವಿದ್ದರೆ ಬಾಡಿ ರಿ ಅಸ್ಸೆಂಬಲ್ ಮಾಡಲಾಗುತ್ತೆ
7 ಅಂತಿಮವಾಗಿ ಕಂಡು ಬಂದ ಅಂಶಗಳ ಕುರಿತು ವರದಿಯನ್ನ ಸಿದ್ಧಪಡಿಸಲಾಗುತ್ತೆ
ಫ್ರಿಡ್ಜ್ನಿಂದ ರಕ್ತ ತೊಟ್ಟಿಕ್ಕುತ್ತಿತ್ತು:
ದೇಹದ ಪೀಸ್ಗಳನ್ನ ನೀಟಾಗಿ ಜೋಡಿಸಿ ಫ್ರಿಡ್ಜ್ ಆನ್ ಮಾಡಿದ್ದ ಕಾರಣ ದೇಹದ ಪೀಸ್ಗಳು ಕೊಳೆಯುವ ಹಂತಕ್ಕೆ ಹೋಗಿರಲಿಲ್ಲ. ಬಿಲ್ಡಿಂಗ್ಗೆ ಎಫ್ಎಸ್ಎಲ್ ಟೀಂ ಎಂಟ್ರಿ ಕೊಟ್ಟಾಗ ಮೃತದೇಹದ ದುರ್ವಾಸನೆ ಬರುತ್ತಿತ್ತಂತೆ, ಅಷ್ಟೇ ಅಲ್ಲ ಫ್ರಿಡ್ಜ್ನೊಳಗೆ ಇಟ್ಟಿದ್ದ ದೇಹದ ತುಂಡುಗಳಿಂದ ರಕ್ತ ತೊಟ್ಟಿಕ್ಕುತ್ತಿದ್ದವು ಎನ್ನಲಾಗಿದೆ. ಕರೆಂಟ್ ಹೋದಂತ ಸಂಧರ್ಬದಲ್ಲಿ ಒಂದಷ್ಟು ರಕ್ತ ಫ್ರಿಡ್ಜ್ ನಿಂದ ಕೆಳ ಬಿದ್ದಿತ್ತು ಅಂತ ಪೊಲೀಸರು ಮಾಹಿತಿ ನೀಡಿದ್ದಾರೆ.