ಹುಬ್ಬಳ್ಳಿ: ಹುಬ್ಬಳ್ಳಿ ಶಹರದ ಕಟ್ಟಿಮನಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಮೃತ್ಯುಂಜಯ ಕಲ್ಲಯ್ಯ ಹಿರೇಮಠ ಅವರಿಗೆ “ರಾಜ್ಯ ಮಟ್ಟದ ಉತ್ತಮ ಶಿಕ್ಷಕ” ಪ್ರಶಸ್ತಿ ಲಭಿಸಿದೆ ಬೆಂಗಳೂರಿನಲ್ಲಿ ಇತ್ತಿಚೆಗೆ ನಡೆದ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ,ಸಾರಿಗೆ ಸಚಿವ ರಾಮಲಿಂಗಾರೆಡ್ಡಿ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ರಾಜ್ಯ ಘಟಕದ ಅಧ್ಯಕ್ಷರಾದ ಎನ್. ರಾಜಗೋಪಾಲ್,
Sunday Special Recipe: ಭಾನುವಾರದ ಬಾಡೂಟಕ್ಕೆ ಮನೆಯಲ್ಲಿಯೇ ಮಾಡಿ ರುಚಿಯಾದ ಕಲ್ಮಿ ಕಬಾಬ್!
ಮತ್ತು ರಾಜ್ಯ ಘಟಕದ ಕಾರ್ಯದರ್ಶಿಗಳಾದ ಎಮ್. ಕೆ. ರಾಜು ಅವರಿಗೂ ಹಾಗೂ ರಾಜ್ಯ ಘಟಕದ ಗೌರವಾಧ್ಯಕ್ಷರಾದ ಡಾ. ಕೆ. ಹನುಮಂತಪ್ಪ ಮತ್ತು ಧಾರವಾಡ ಜಿಲ್ಲಾ ಘಟಕದ ನಿಕಟ ಪೂರ್ವ ಜಿಲ್ಲಾ ಅಧ್ಯಕ್ಷರಾದ ಎಮ್. ಬಿ. ಬಿರಾದಾರ, ಬಿ. ಎಲ್. ಮಲ್ಲಿಗವಾಡ ಅಧ್ಯಕ್ಷರು ಜಿಲ್ಲಾ ಘಟಕ ಧಾರವಾಡ. ಬಿ. ಆರ್. ಪಾಟೀಲ ಕಾರ್ಯದರ್ಶಿ ಜಿಲ್ಲಾ ಘಟಕ ಧಾರವಾಡ ಸೇರಿದಂತೆ ಗಣ್ಯ ಅತಿ ಗಣ್ಯರು ಉಪಸ್ಥಿತರಿದ್ದರು.