ಬೆಂಗಳೂರು: ರಾಜ್ಯ ಸರ್ಕಾರ ಮತ್ತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದೆ. ಅರ್ಕಾವತಿ ರಿಡೂ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಟಿ ರವಿ ನೀಡಿದ್ದ ದೂರನ್ನು ರಾಜ್ಯಪಾಲರು ಅಸ್ತ್ರ ಮಾಡಿಕೊಂಡಂತೆ ಕಾಣುತ್ತಿದ್ದು ಕೆಂಪಣ್ಣ ಆಯೋಗದ ವರದಿ ಸ್ಟೇಟಸ್ ರಿಪೋರ್ಟ್ ಕೇಳಿದ್ದಾರೆ.
Sunday Special Recipe: ಭಾನುವಾರದ ಬಾಡೂಟಕ್ಕೆ ಮನೆಯಲ್ಲಿಯೇ ಮಾಡಿ ರುಚಿಯಾದ ಕಲ್ಮಿ ಕಬಾಬ್!
ಸಂಪೂರ್ಣ ಸ್ಟೇಟಸ್ ರಿಪೋರ್ಟ್ ನೀಡುವಂತೆ ಸರ್ಕಾರಕ್ಕೆ ರಾಜ್ಯಪಾಲರು ಸೂಚಿಸಿದ್ದಾರೆ. ರಾಜ್ಯಪಾಲರ ಸೂಚನೆ ಬೆನ್ನಲ್ಲೇ ನಗರಾಭಿವೃದ್ಧಿ ಇಲಾಖೆ ವರದಿ ಸಿದ್ಧಪಡಿಸಿದೆ. ಬೆಂಗಳೂರು ಅಭಿವೃದ್ಧಿ ಸಚಿವರು ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಕೆಂಪಣ್ಣ ಆಯೋಗದ ವರದಿಯ ಅಂಶಗಳನ್ನು ನಗರಾಭಿವೃದ್ಧಿ ಇಲಾಖೆ ಸಲ್ಲಿಸಿತ್ತು. ಸೋಮವಾರದ ಬಳಿಕ ಬೆಂಗಳೂರು ಅಭಿವೃದ್ಧಿ ಇಲಾಖೆಯಿಂದ ರಾಜ್ಯಪಾಲರಿಗೆ ವರದಿ ಸಲ್ಲಿಕೆಯಾಗುವ ಸಾಧ್ಯತೆಯಿದೆ.
ಏನಿದು ಪ್ರಕರಣ?
ಬಿಡಿಎ ಅರ್ಕಾವತಿ ಬಡಾವಣೆಗಾಗಿ ಸ್ವಾಧೀನವಾಗಿದ್ದ ಒಟ್ಟು 541 ಎಕರೆ ಭೂಮಿಯನ್ನು ಡಿನೋಟಿಫೈ ಮಾಡಲಾಗಿತ್ತು. ಕೋರ್ಟ್ ಸೂಚನೆಯಂತೆ ರೀಡೂ ಮಾಡಲಾಗಿದೆ ಎಂಬ ಸರ್ಕಾರ ದ ಸಮರ್ಥನೆಯಾಗಿತ್ತು. ಆದರೆ, ಇದರಲ್ಲಿ ಸಾವಿರಾರು ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿ, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿತ್ತು. ಒತ್ತಡ ತೀವ್ರಗೊಂಡ ಹಿನ್ನೆಲೆಯಲ್ಲಿ ಈ ಕುರಿತು ತನಿಖೆ ನಡೆಸಲು ನಿವೃತ್ತ ನ್ಯಾಯಮೂರ್ತಿ ಎಚ್.ಎಸ್.ಕೆಂಪಣ್ಣ ಅವರ ನೇತೃತ್ವದಲ್ಲಿವಿಚಾರಣಾ ಆಯೋಗ ರಚಿಸಲಾಗಿತ್ತು.
ನ್ಯಾಯಾಂಗ ಆಯೋಗವು ಒಟ್ಟು 4 ಸಂಪುಟಗಳಲ್ಲಿ 1,861 ಪುಟಗಳ ವಿಚಾರಣಾ ವರದಿ ಸಲ್ಲಿಸಿತ್ತು. ಆದರೆ, ಈ ವರದಿ ಸಚಿವ ಸಂಪುಟದ ಮುಂದೆ ಚರ್ಚೆಗೆ ಬಂದಿರಲಿಲ್ಲ ಮತ್ತು ವಿಧಾನ ಮಂಡಲದಲ್ಲಿ ಮಂಡನೆಯೂ ಆಗಿರಲಿಲ್ಲ. ಹಿಂದಿನ ಬಿಜೆಪಿ ಸರ್ಕಾರ ದ ಅವಧಿಯಲ್ಲಿ40 ಪರ್ಸೆಂಟ್ ಕಮಿಷನ್ ಆರೋಪಕ್ಕೆ ಪ್ರತಿಯಾಗಿ, ರೀಡೂ ಪ್ರಕರಣವೂ ಸದ್ದು ಮಾಡಿತ್ತಾದರೂ ನಂತರ ತೆರೆಮರೆಗೆ ಸರಿದು, ವಿಚಾರಣಾ ಆಯೋಗದ ವರದಿ ಗೌಪ್ಯವಾಗೇ ಉಳಿದಿತ್ತು. ಆದರೆ, ಮೇಲ್ಮನೆ ಸದಸ್ಯ ಸಿ.ಟಿ.ರವಿ ಅವರು ನ್ಯಾ.ಕೆಂಪಣ್ಣ ವರದಿಯನ್ನು ಶಾಸನಸಭೆಗಳಲ್ಲಿ ಮಂಡನೆ ಮಾಡುವಂತೆ ಸಿಎಂ ಹಾಗೂ ರಾಜ್ಯಪಾಲರನ್ನು ಕೋರಿ ಪತ್ರ ಬರೆದಿದ್ದರು.