ಗದಗ: ಗದಗ ಜಿಲ್ಲೆ ಮುಂಡರಗಿ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ರಾತ್ರಿ ಸುರಿದ ಭಾರಿ ಮಳೆಗೆ ಸಿಡಿಲು ಬಡಿದು ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ನಿಪ್ಪಾಣಿ ಮೂಲದ ಕುರಿಗಾಹಿಗಳಿಗೆ ಸೇರಿದ ನಾಲ್ಕು ಕುರಿಗಳು ಸಾವನ್ನಪ್ಪಿದ್ದು, ಬೆಳಗಾವಿ ಜಿಲ್ಲಾ ಚಿಕ್ಕೋಡಿ ತಾಲೂಕಿನ ಕಡಲಾತ ಗ್ರಾಮದ ಶಿವಪ್ಪ ಕಲ್ಲಪ್ಪ ಶಿರದಾರ್ ಎಂಬುವವರ ನಾಲ್ಕು ಕುರಿಗಳಾಗಿವೆ, ಮಳೆಗಾಲದಲ್ಲಿ ತಮ್ಮ ಕುರಿಗಳನ್ನ ಮೇಯಿಸುತ್ತಾ ಸಂಚಾರ ಮಾಡುವ ಕುರಿಗಾಹಿಗಳು.
Pitru Paksha 2024: ಪಿತೃಪಕ್ಷದಲ್ಲಿ ಅಪ್ಪಿ ತಪ್ಪಿಯೂ ಈ ತಪ್ಪುಗಳ ಮಾಡಬೇಡಿ..! ಪಿತೃ ದೋಷ ಬರುತ್ತೆ!
ನಿನ್ನೆ ರಾತ್ರಿ ಗ್ರಾಮದ ಹೊರವಲಯದಲ್ಲಿ ತಂಗಿದ್ದಾಗ ರಾತ್ರಿ ಸುರಿದ ಭಾರಿ ಮಳೆ ವೇಳೆ ಸಿಡಿಲು ಬಡಿದು ಕುರಿಗಳ ಸಾವನ್ನಪ್ಪಿವೆ. ಇನ್ನೂ ಕುರಿಗಾಹಿಗಳಿಗೆ ಪಶು ಸಂಗೋಪನಾ ಇಲಾಖೆ ಪರಿಹಾರ ನೀಡಲಿ ಎಂದು ಗ್ರಾಮಸ್ಥರ ಆಗ್ರಹಿಸಿದ್ದು, ಮುಖಂಡರಾದ ಬಸವರಾಜ ಪೂಜಾರ, ಬಸವರಾಜ ಕೊಪ್ಪಳ ಸೇರಿದಂತೆ ಕುರಿಗಾಹಿಗಳಿಂದ ಬೇಡಿಕೆ ಇಟ್ಟಿದ್ದಾರೆ.