ಬೆಂಗಳೂರು:- ಮುನಿರತ್ನ ವಿರುದ್ಧದ ಕೇಸ್ಗಳು ಸಿಐಡಿಗೆ ವರ್ಗಾವಣೆ ಹಿನ್ನೆಲೆ ಪ್ರಕರಣಗಳ ವಿಶೇಷ ತನಿಖಾ ತಂಡಕ್ಕೆ ಒಟ್ಟು 25 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ನೇಮಕ ಮಾಡಿಕೊಳ್ಳಲಾಗಿದೆ.
ಶೀಘ್ರವೇ ಮುನಿರತ್ನರ ಶಾಸಕ ಸ್ಥಾನ ವಜಾ ಮಾಡಿ: ಸ್ಪೀಕರ್ಗೆ ಕಾನೂನು ಸಚಿವರಿಂದ ಪತ್ರ!
ಓರ್ವ ಎಸಿಪಿ, ಇಬ್ಬರು ಡಿಎಸ್ಪಿ, ಓರ್ವ ಮಹಿಳಾ ಪಿಐ ಸೇರಿ ನಾಲ್ವರು ಇನ್ಸ್ ಪೆಕ್ಟರ್ಗಳು, ಮೂವರು ಪಿಎಸ್ಐ ಹಾಗೂ ಇಬ್ಬರು ಎಎಸ್, ಓರ್ವ ಮಹಿಳಾ ಹೆಚ್ಸಿ ಸೇರಿ ಮೂವರು ಹೆಚ್ಸಿ ಹಾಗೂ ಇಬ್ಬರು ಪಿಸಿ, ಮೂವರು ಆರ್ಹೆಚ್ಸಿ, ಮೂವರು ಆರ್ಪಿಸಿ, ಇಬ್ಬರು ಮಹಿಳಾ ಆರ್ಪಿಸಿ. ಸಿಸಿಬಿ ಎಸಿಪಿ ಧರ್ಮೆಂದ್ರ, ಡಿಎಸ್.ಪಿ.ರವಿಕುಮಾರ್, ಡಿಎಸ್ಪಿ ಕವಿತಾ, ಪಿಐ ಗಳಾದ ಸುನೀಲ್, ಬಾಲರಾಜ್, ಅವಿನಾಶ್ರನ್ನು ಸರ್ಕಾರ ನೇಮಕ ಮಾಡಿದೆ.ಓರ್ವ ಎಸಿಪಿ, ಇಬ್ಬರು ಡಿಎಸ್ಪಿ, ಓರ್ವ ಮಹಿಳಾ ಪಿಐ ಸೇರಿ ನಾಲ್ವರು ಇನ್ಸ್ ಪೆಕ್ಟರ್ಗಳು, ಮೂವರು ಪಿಎಸ್ಐ ಹಾಗೂ ಇಬ್ಬರು ಎಎಸ್, ಓರ್ವ ಮಹಿಳಾ ಹೆಚ್ಸಿ ಸೇರಿ ಮೂವರು ಹೆಚ್ಸಿ ಹಾಗೂ ಇಬ್ಬರು ಪಿಸಿ, ಮೂವರು ಆರ್ಹೆಚ್ಸಿ, ಮೂವರು ಆರ್ಪಿಸಿ, ಇಬ್ಬರು ಮಹಿಳಾ ಆರ್ಪಿಸಿ. ಸಿಸಿಬಿ ಎಸಿಪಿ ಧರ್ಮೆಂದ್ರ, ಡಿಎಸ್.ಪಿ.ರವಿಕುಮಾರ್, ಡಿಎಸ್ಪಿ ಕವಿತಾ, ಪಿಐ ಗಳಾದ ಸುನೀಲ್, ಬಾಲರಾಜ್, ಅವಿನಾಶ್ರನ್ನು ಸರ್ಕಾರ ನೇಮಕ ಮಾಡಿದೆ.
ಇನ್ನು ಮುನಿರತ್ನ ವಿರುದ್ದ ದಾಖಲಾದ ಪ್ರಕರಣಗಳ ತನಿಖೆ ಸಂಬಂಧ ಇತ್ತೀಚೆಗೆ ಸರ್ಕಾರ ಎಸ್ಐಟಿ ರಚನೆ ಮಾಡಿತ್ತು. ಸೆಷ್ಟೆಂಬರ್ 21 ರಂದು ಮುಖ್ಯಸ್ಥರಾಗಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ನೇಮಕ ಮಾಡಿ ತನಿಖಾ ತಂಡ ರಚನೆ ಮಾಡಿ ಸರ್ಕಾರ ಆದೇಶಸಿತ್ತು.
ಬಿಜೆಪಿ ಶಾಸಕ ಮುನಿರತ್ನ ಈಗಾಗಲೇ ಮೂರ್ಮೂರು ಪ್ರಕರಣಗಳಲ್ಲಿ ಸಿಲುಕಿಕೊಂಡಿದ್ದಾರೆ. 2 ಕೇಸ್ಗಳಿಂದ ಆಚೆ ಬಂದು ಮತ್ತೊಂದ್ರಲ್ಲಿ ಜೈಲು ಪಾಲಾಗಿದ್ದಾರೆ. ಇಷ್ಟಾದರೂ ಬಿಜೆಪಿ ಶಾಸಕನ ಬೆಂಬಲಿಗರು ಸಾಕ್ಷಿಗಳಿಗೆ ಬೆದರಿಕೆ ಹಾಕುತ್ತಿದ್ದಾರಂತೆ. ಹೀಗಾಗಿ ಮಾಜಿ ಕಾರ್ಪೋರೇಟರ್ ವೇಲು ನಾಯ್ಕರ್ ಹಾಗೂ ದಲಿತರ ಮುಖಂಡರು ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದ್ದಾರೆ. ಪೊಲೀಸರಿಗೆ ಹೇಳಿ ಕ್ರಮ ಕೈಗೊಳ್ಳೋದಾಗಿ ಸಿಎಂ ಭರವಸೆ ಕೊಟ್ಟಿದ್ದಾರಂತೆ.