ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ ಆರಂಭಿಸಿದೆ. ಮೈಸೂರು ನಗರ ಬಿಜೆಪಿ ಕಚೇರಿ ಮುಂಭಾಗ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಶಾಸಕ ಶ್ರೀವತ್ಸ, ಜಿಲ್ಲಾಧ್ಯಕ್ಷರಾದ ಎಲ್.ನಾಗೇಂದ್ರ ಹಾಗೂ ಎಲ್ಆರ್.ಮಹದೇವಸ್ವಾಮಿ, ಮಾಜಿ ಸಚಿವ ಎನ್.ಮಹೇಶ್, ಮಾಜಿ ಶಾಸಕ ನಿರಂಜನ್ ಸೇರಿ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು. ಸಿದ್ದರಾಮಯ್ಯ ಈ ಕೂಡಲೇ ರಾಜೀನಾಮೆ ನೀಡಬೇಕು.
RBI: ಮಾರುಕಟ್ಟೆಯಲ್ಲಿ 10, 20 ಮತ್ತು 50 ರೂಪಾಯಿ ನೋಟು ಸಿಗ್ತಿಲ್ಲ ಯಾಕೆ.? ಸಿಕ್ಕರೂ ಹಳೆಯ, ಹರಿದ ನೋಟು!
ಕೋರ್ಟ್ಗೆ ಹೋಗಿ ನಿರ್ದೋಷಿ ಎಂದು ತೀರ್ಪು ಬಂದ ಮೇಲೆ ಮತ್ತೆ ಅಧಿಕಾರಕ್ಕೆ ಬನ್ನಿ. ಮೊದಲು ನ್ಯಾಯಾಲಯದ ತೀರ್ಪು ಎತ್ತಿ ಹಿಡಿಯುವ ಕೆಲಸ ಮಾಡಿ ಎಂದು ಪ್ರತಿಭಟನೆಯಲ್ಲಿ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.