ಹುಬ್ಬಳ್ಳಿ:- ಹುಬ್ಬಳ್ಳಿಯ ಲೋಹಿಯಾನಗರದಲ್ಲಿ ಹುಡುಗಿ ಚುಡಾಯಿಸಿದ್ದಕ್ಕೆ ಬುದ್ದಿ ಹೇಳಿದ ಮಹಿಳೆಗೆ ಚಾಕು ಇರಿದು ಪರಾರಿಯಾದ ಘಟನೆ ಜರುಗಿದೆ.
Nelamangala: ಐರನ್ ಮಾತ್ರೆ ಸೇವಿಸಿ ಮಕ್ಕಳು ಅಸ್ವಸ್ಥ; ಶಿಕ್ಷಕರ ನಿರ್ಲಕ್ಷ್ಯ ಆರೋಪ!
ಆರೋಪಿ ಮಹೇಶ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಾಯಾಳು ನೀಲಾ ಹಂಪಣ್ಣ ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ವಿಷಯ ತಿಳಿದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ, ಚಾಕು ಇರಿತಕ್ಕೆ ಒಳಗಾದ ಮಹಿಳೆಯಿಂದ ಮಾಹಿತಿ ಪಡೆಯುತ್ತಿದ್ದಾರೆ.
ಹೌದು, ಹುಡುಗಿಗೆ ಚುಡಾಯಿಸಿದ್ದಕ್ಕೆ ಆರೋಪಿ ಮಹೇಶ್ಗೆ ಗಾಯಾಳು ಮಹಿಳೆ ನೀಲಾ ಅವರು ಬುದ್ಧಿ ಹೇಳಿದ್ದರು. ಇದರಿಂದ ಆಕ್ರೋಶಗೊಂಡ ಮಹೇಶ್, ನೀಲಾ ಅವರಿಗೆ ಚಾಕು ಇರಿದು ಪರಾರಿಯಾಗಿದ್ದ. ಕೂಡಲೇ ಆತನನ್ನು ಪತ್ತೆ ಹಚ್ಚಿದ ಪೊಲಿಸರು, ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.