ಚಿಕ್ಕಬಳ್ಳಾಪುರ:- ತಾಲೂಕಿನ ಗೇರಹಳ್ಳಿ ಗೇಟ್ ಬಳಿ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಜರುಗಿದೆ.
Muda Scam: ಸಿಎಂ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ: ಪ್ರಿಯಾಂಕ್ ಖರ್ಗೆ!
17 ವರ್ಷದ ನಿತಿಶ್, 17 ವರ್ಷದ ನಿತಿನ್ ಹಾಗೂ ವೈಭವ್ ಮೃತರು. ನಿತಿಶ್ ಹಾಗೂ ನಿತಿನ್ ಬಿಜಿಎಸ್ ಶಾಲೆಯಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದರೆ, ವೈಭವ್ ಗುಡ್ ಶೆರ್ಡ್ ಶಾಲೆಯಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದ. ಎಂದಿನಂತೆ ಮೂವರು ಟ್ಯೂಷನ್ ಮುಗಿಸಿಕೊಂಡು ಒಂದೇ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ.
ಈ ಕುರಿತು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.