ಗದಗ:- ಗಣೇಶ್’ನ ವಿಸರ್ಜನೆ ಮೆರವಣಿಗೆ ವೇಳೆ ಎತ್ತು ಹಾಯ್ದು ಇಬ್ಬರಿಗೆ ಗಾಯವಾಗಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಜರುಗಿದೆ.
ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಭ್ರಷ್ಟಾಚಾರ ಖಂಡಿಸಿ ಎಬಿವಿಪಿ ಪ್ರತಿಭಟನೆ!
ಲಕ್ಷ್ಮೇಶ್ವರ ಪಟ್ಟಣದ 10 ನೇ ವಾರ್ಡ್ ನಲ್ಲಿ ಗಣೇಶ ಪ್ರತಿಷ್ಟಾಪನೆ ಮಾಡಲಾಗಿತ್ತು. ಅದರಂತೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಮೆರವಣಿಗೆ ಮಾಡಲಾಗಿತ್ತು. ವಿಸರ್ಜನೆ ಮೆರವಣಿಗೆಗೆ ತಂದಿದ ಎತ್ತು ಹೆದರಿ ಮಹಿಳೆಯರಿಗೆ ಹಾಯ್ದು ಗಾಯವಾಗಿದೆ.
ನಂದಾ ಓಂಕಾರಿ, ಗಿರಿಜಾ ಕೊಟಗಿ ಎಂಬ ಮಹಿಳೆಯರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನ ಗದಗ ಜಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.