ಬೆಂಗಳೂರಿನ ವೈಯಾಲಿಕಾವಲ್ನಲ್ಲಿ ನಡೆದ ಮಹಿಳೆ ಮಹಾಲಕ್ಷ್ಮಿಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಕ್ತಿ ರಂಜನ್ ರಾಯ್ನ ತಾಯಿ ಕುಂಜಲತಾ ರಾಯ್ ಆಘಾತಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತಾಡಿದ ಅವರು, ತಮ್ಮ ಮಗ ಕೊಲೆಯಾದ ಮಹಿಳೆಯ ಟ್ರ್ಯಾಪ್ ಮಾಡಿದ್ದಳು. ಅವಳು ಅವನಿಂದ ನಿರಂತರವಾಗಿ ಹಣ ಕೇಳುತ್ತಲೇ ಇದ್ದಳು. ಈ ವಿಚಾರವನ್ನು ಆತ ಹೇಳಿಕೊಂಡಿದ್ದ. ನಾನು ಅವನನ್ನು ಬೆಂಗಳೂರು ತೊರೆಯುವಂತೆ ಹೇಳಿದ್ದೆ ಎಂದು ಹೇಳಿಕೊಂಡಿದ್ದಾರೆ
ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿರುವ ಒಡಿಶಾದ (Odisha) ಭದ್ರಕ್ನ ಎಸ್ಪಿ ವರುಣ್ ಗುಂಟುಪಲ್ಲಿ, ಇತ್ತೀಚೆಗೆ ನಡೆದ ಮಹಿಳೆಯ ಕೊಲೆ ಪ್ರಕರಣದ ತನಿಖೆಗೆ ಬೆಂಗಳೂರು ಪೊಲೀಸರ ತಂಡ ಇಲ್ಲಿಗೆ ಬಂದಿತ್ತು. ಪ್ರಮುಖ ಆರೋಪಿ ಭದ್ರಕ್ಗೆ ಸೇರಿದವನು ಎಂದು ತಂಡ ಹೇಳಿದೆ. ತಂಡವು ಆರೋಪಿಗಳನ್ನು ಬಂಧಿಸುವ ಮೊದಲು ಮುಕ್ತಿರಾಜನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಬೆಂಗಳೂರು ಪೊಲೀಸರಿಗೆ (Police) ಹಸ್ತಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.