ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕ್ವಿನ್ ಸಿಟಿ (ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರ) ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದ ದಿನದಿಂದಲೂ ಬೆಂಗಳೂರು ಬೌದ್ಧಿಕ ನಗರ ಎಂದು ಹೆಸರು ಮಾಡಿದೆ. ಈ ನಗರದ ಅಭಿವೃದ್ಧಿಗೆ ನೆಹರು ಸಾಕಷ್ಟು ಶಕ್ತಿ ಕೊಟ್ಟಿದ್ದಾರೆ. ನಾವೆಲ್ಲರೂ ಸೇರಿ ಇನ್ನಷ್ಟು ಬಲಿಷ್ಠಗೊಳಿಸಬೇಕಿದೆ ಎಂದರು.
BIGG NEWS: ಕೇಂದ್ರದಿಂದ ಕಾರ್ಮಿಕರಿಗೆ ಗುಡ್ ನ್ಯೂಸ್: ಅ.1ರಿಂದ ಕನಿಷ್ಠ ವೇತನ ದರ ಹೆಚ್ಚಳ
ಕರ್ನಾಟಕದ ಸಾಮರ್ಥ್ಯದ ಬಗ್ಗೆ ಕಿಂಚಿತ್ತೂ ಅನುಮಾನ ಬೇಡ. ಬೆಂಗಳೂರು ನಗರಾಭಿವೃದ್ಧಿ ಸಚಿವನಾಗಿ, ಈ ನಗರದ ಅಭಿವೃದ್ಧಿಗೆ ನಾನು ಕಟಿಬದ್ಧನಾಗಿದ್ದೇನೆ. ನೀರು, ವಿದ್ಯುತ್, ರಸ್ತೆ ಸೇರಿದಂತೆ ಎಲ್ಲಾ ಮೂಲ ಸೌಕರ್ಯವನ್ನು ಜನರಿಗೆ ಹಾಗೂ ಕೈಗಾರಿಕೆಗಳಿಗೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ. ಅಗಾಧ ಮಾನವ ಸಂಪನ್ಮೂಲವನ್ನು ಕರ್ನಾಟಕ ಹೊಂದಿದೆ. ಆರೋಗ್ಯ ಕ್ಷೇತ್ರದಲ್ಲಿ ಬೆಂಗಳೂರು ಹಾಗೂ ಕರ್ನಾಟಕ ಮುಂಚೂಣಿಯಲ್ಲಿದೆ. ಆರೋಗ್ಯ ತಪಾಸಣೆ ವೆಚ್ಚ ಕಡಿಮೆ ದರದಲ್ಲಿ ದೊರಕುತ್ತದೆ ಎಂದರು.
ಎರಡು ದಿನಗಳ ಹಿಂದೆ ಕರ್ನಾಟಕದ ಮೊಟ್ಟ ಮೊದಲ ನೈಸರ್ಗಿಕ ಅನಿಲ ವಿದ್ಯುತ್ ಉತ್ಪಾದನಾ ಸ್ಥಾವರವನ್ನು ಯಲಹಂಕದಲ್ಲಿ ಉದ್ಘಾಟನೆ ಮಾಡಲಾಯಿತು. ಈ ರೀತಿಯ ಭವಿಷ್ಯವನ್ನು ಮುಂದಿಟ್ಟುಕೊಂಡ ಅನೇಕ ಯೋಜನೆಗಳನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈ ರಾಜ್ಯಕ್ಕೆ ನೀಡಿದೆ. ಇನ್ನೇನು ಕೆಲವೇ ದಿನಗಳಲ್ಲಿ ಕಾವೇರಿ ಕುಡಿಯುವ ನೀರಿನ ಐದನೇ ಹಂತ ಕಾಮಗಾರಿ ಮುಗಿಯಲಿದೆ. ಈ ಹಿಂದಿನ ನಾಲ್ಕು ಹಂತಗಳಿಂದ 1,450 ಎಂಎಲ್ಡಿ ನೀರನ್ನು ಬೆಂಗಳೂರಿಗೆ ಸರಬರಾಜು ಮಾಡಲಾಗುತ್ತಿದೆ. ಈ ಐದನೇ ಹಂತದ ಯೋಜನೆಯಲ್ಲಿ 775 ಎಂಎಲ್ಡಿ ನೀರನ್ನು ಬೆಂಗಳೂರಿಗೆ ನಾವು ನೀಡುತ್ತಿದ್ದೇವೆ. ಮುಂದಿನ 10 ವರ್ಷ ಬೆಂಗಳೂರು ಹಾಗೂ ನಗರದ ಸುತ್ತಮುತ್ತ ನೀರಿನ ತೊಂದರೆ ಇರುವುದಿಲ್ಲ ಎಂದು ತಿಳಿಸಿದರು.