ಕೋಲಾರ : ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವ ಜೊತೆಗೆ ಮೊಟ್ಟೆ, ಗ್ಯಾಸ್, ಬಾಡಿಗೆ ಹಣವನ್ನು ನಿಗದಿತ ಸಮಯಕ್ಕೆ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘವು ಪ್ರತಿಭಟನೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIRಗೆ ಕೋರ್ಟ್ ಆದೇಶ: ಕಾರಣ ಇಲ್ಲಿದೆ!
ನಗರದ ಪಾಲಸಂದ್ರಲೇಔಟ್ ಕಛೇರಿಯಲ್ಲಿ ನಡೆದ ಜಿಲ್ಲಾ ಸಮಿತಿ ಸಭೆಯ ನಂತರ ಮಾತನಾಡಿದ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಲಕ್ಷ್ಮೀದೇವಮ್ಮ ಸರಕಾರದ ಪ್ರತಿಯೊಂದು ಯೋಜನೆಯ ಅನುಷ್ಠಾನಗೊಳಿಸಲು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಿಬ್ಬಂದಿ ಬೇಕಾಗಿದೆ ಆದರೆ ಅವರಿಗೆ ಸೌಲಭ್ಯಗಳನ್ನು ಒದಗಿಸಲು ಮಾತ್ರ ಸರ್ಕಾರವು ಹಿಂದೆ ಬಿದ್ದಿದೆ ನೌಕರರ ಮತ್ತು ಸಿಬ್ಬಂದಿಯ ಯೋಗಕ್ಷೇಮಕ್ಕೆ ಅನುದಾನವನ್ನು ಕೊಡದೇ ನಿರ್ಲಕ್ಷ ವಹಿಸಿದ್ದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಅಂಗನವಾಡಿ ನೌಕರರಿಗೆ ಮೊಟ್ಟೆ, ಎಲ್ಪಿಜಿ ಗ್ಯಾಸ್ ಸಿಲಿಂಡರ್, ಬಾಡಿಗೆ, ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಸಮಯಕ್ಕೆ ಸರಿಯಾಗಿ ನೀಡದೆ ಪ್ರತಿ ತಿಂಗಳು ಕಾರ್ಯಕರ್ತೆಯರು ಕೈಯಿಂದ ಭರಿಸುವಂತಾಗಿದೆ ಇದರಿಂದ ಸಾಕಷ್ಟು ತೊಂದರೆಯಾಗಿದೆ ರಾಜ್ಯ ಸರ್ಕಾರವು ನಿಗದಿತ ಪಿಂಚಣಿ ಯೋಜನೆಯನ್ನು ಕೂಡಲೇ ಜಾರಿಗೊಳಿಸಬೇಕು ಅಂಗನವಾಡಿ ನೌಕರರಿಗೆ ಹಾಗೂ ಸಿಬ್ಬಂದಿಗೆ ಕೆಲಸಕ್ಕೆ ತಕ್ಕಂತೆ ವೇತನದ ಜೊತೆಗೆ ನಿವೃತ್ತಿ ನಂತರದ ಪಿಂಚಣಿಯನ್ನು ನೀಡಬೇಕು ಎಂದು ಒತ್ತಾಯಿಸಿದರು.