ಬೆಂಗಳೂರು: ರಾಜಕೀಯ ಕುರುಕ್ಷೇತ್ರಕ್ಕೆ ನಾವು ತಯಾರಿದ್ದೇವೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಅಥವಾ ಸರ್ಕಾರ ವಿಸರ್ಜನೆ ಮಾಡಿ ಎಂದು ಬಿಜೆಪಿ ಮುಖಂಡ ಹಾಗೂ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಸವಾಲು ಹಾಕಿದರು. ಮಾತನಾಡಿದ ಅವರು, ಮುಹಬ್ಬತ್ ಕಿ ದುಖಾನ್ ಎಂದು ಪಾದಯಾತ್ರೆ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಭ್ರಷ್ಟಾಚಾರದ ಶಾಪಿಂಗ್ ಮಾಲ್ ತೆರೆದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಮಾಡ ಹಾಗಲಕಾಯಿ ಬಗ್ಗೆ ಗೊತ್ತಾ.? ಇದರ ಅದ್ಭುತ ಆರೋಗ್ಯ ಪ್ರಯೋಜನ ಕೇಳಿದ್ರೆ ಶಾಕ್ ಆಗ್ತೀರಾ..?
ಭ್ರಷ್ಟಾಚಾರದ ಆರೋಪ ಬಂದಾಗ ತನಿಖೆಗೆ ಸಿದ್ಧರಿಲ್ಲ. ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಭಯಭೀತರಾಗಿದ್ದಾರೆ. ಒಂದೊಂದು ಆದೇಶವೂ ಅವರನ್ನು ಭೀತಿಗೊಳಪಡಿಸಿದೆ. ಪ್ರಜಾಪ್ರಭುತ್ವ ಸಂವಿಧಾನದ ವಿರುದ್ಧವಾಗಿ ಹೋರಾಟ ಮಾಡ್ತಿದ್ದಾರೆ. ನ್ಯಾಯಾಲಯದ ಆದೇಶಗಳು ಸಾರ್ವಜನಿಕ ಕ್ಷೇತ್ರದ ಕಳಂಕ ಆಡಳಿತ ಬಯಲು ಮಾಡಿದೆ ಎಂದು ಕಿಡಿಕಾರಿದರು. ರಾಜ್ಯಪಾಲರ ವಿರುದ್ಧ ಹೀನಾಯ ಟೀಕೆ, ಬೆದರಿಕೆ ಹಾಕಿದ್ದರು.ಇದು ಪ್ರಜಾಪ್ರಭುತ್ವ ಕ್ಕೆ ವಿರುದ್ಧವಾದ ವರ್ತನೆ. ಸಿಎಂ ಸಿದ್ದರಾಮಯ್ಯ, ಡಿಕೆಶಿ ರಾಜ್ಯಪಾಲರ ಕ್ಷಮೆ ಯಾಚನೆ ಮಾಡಬೇಕು ಎಂದು ಒತ್ತಾಯಿಸಿದರು.