ಮೈಸೂರು:- ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ. ಮಹಿಷ ಮಂಡಲೋತ್ಸವ ವರ್ಸಸ್ ಚಾಮುಂಡಿ ಚಲೋ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿ ಆಗಿದೆ.
ಕೂಲ್ ಕ್ಯಾಪ್ಟನ್ ಧೋನಿಗಾಗಿ ನಿಯಮವನ್ನೇ ಬದಲಿಸಿದ BCCI: IPL ಹೊಸ ರೂಲ್ಸ್ ಏನಿದೆ!?
ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದ್ದು, ಚಾಮುಂಡಿ ತಾಯಿ ದರ್ಶನಕ್ಕೆ ಯಾರಿಗೂ ಇವತ್ತು ಅವಕಾಶ ಇಲ್ಲ. ಹೀಗಾಗಿ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಮಹಿಷ ದಸರಾ ಆಚರಣಾ ಸಮಿತಿಯು ಇಂದು ಮಹಿಷ ದಸರಾ ಆಚರಣೆಗೆ ಕರೆ ನೀಡಿತ್ತು. ಬೆಳಗ್ಗೆ 10:30ಕ್ಕೆ ಚಾಮುಂಡಿಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆಗೆ ಪುಷ್ಪಾರ್ಚನೆ ಹಾಗೂ ಪುರಭವನದ ಹೊರಾವರಣದಲ್ಲಿ ಮಹಿಷ ಮಂಡಲೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ತಿಳಿಸಿತ್ತು.
ಈ ವೇಳೆ ಯಾವುದೇ ಮೆರವಣಿಗೆ, ಬೈಕ್ ರ್ಯಾಲಿ ನಡೆಸುವುದು, ಪರ-ವಿರೋಧ ಘೋಷಣೆ ಕೂಗುವುದು, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡುವುದು, 5 ಜನರಿಗಿಂತ ಹೆಚ್ಚಿನ ಜನ ಗುಂಪು ಸೇರುವುದು, ಯಾವುದೇ ಬಹಿರಂಗ ಸಭೆ ಸಮಾರಂಭಗಳನ್ನು ನಡೆಸುವುದು ಹಾಗೂ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಪ್ರಚಾರ, ದ್ವನಿವರ್ಧಕ ಬಳಸುವುದು, ಫ್ಲೆಕ್ಸ್, ಬ್ಯಾನರ್ ಅಳವಡಿಸುವುದು, ಕರಪತ್ರಗಳನ್ನು ಹಂಚುವುದು, ಮೂರ್ತಿ ಮೆರವಣಿಗೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.