ಬೆಂಗಳೂರು:- ಗಂಗೇನಹಳ್ಳಿ ಡಿನೋಟಿಫಿಕೇಶ್ ಪ್ರಕರಣದಲ್ಲಿ ಎಡಿಜಿಪಿ ಚಂದ್ರಶೇಖರ್ ಮತ್ತು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮಧ್ಯೆ ಯುದ್ಧ ತಾರಕಕ್ಕೇರಿದೆ.
ನಾಡಹಬ್ಬಕ್ಕೆ ದಿನಗಣನೆ ಆರಂಭ: ದಸರಾ ಉತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಅವರಿಗೆ ಅಧಿಕೃತ ಆಹ್ವಾನ!
ರಾಜಕಾಲುವೆ ಮೇಲೆ ಮನೆ ಕಟ್ಟಿದ್ದಾರೆ ಅಂತಾ ಎಡಿಜಿಪಿ ವಿರುದ್ಧ ಕುಮಾರಸ್ವಾಮಿ ನಿನ್ನೆ ಬಾಂಬ್ ಹಾಕಿದ್ದರು. ಇದೀಗ ಚಂದ್ರಶೇಖರ್ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ವಾಗ್ದಾಳಿ ಮಾಡಿದ್ದಾರೆ.
X ಮಾಡಿರುವ ಕುಮಾರಸ್ವಾಮಿ, ಹೆಚ್ಡಿ ಕುಮಾರಸ್ವಾಮಿ, ಅಪ್ರಬುದ್ಧ ಅವಿವೇಕಿಗಳಿಗೆ ಏನು ಹೇಳುವುದು? ಲೋಕಾಯುಕ್ತ ಎಸ್ಐಟಿ ಎಡಿಜಿಪಿ ಹುದ್ದೆಯಲ್ಲಿರುವ ಕಳಂಕಿತ, ಕ್ರಿಮಿನಲ್ ಪ್ರವೃತ್ತಿಯ ಅಧಿಕಾರಿ ಕುಮಾರಸ್ವಾಮಿಯವರ ಅಧಿಕಾರಾವಧಿಯಲ್ಲಿಯೂ ಕೆಲಸ ಮಾಡಿರಲಿಲ್ಲವೇ? ಎನ್ನುವುದು ಈ ಸರಕಾರದಲ್ಲಿರುವ ಕೆಲವರ ಪ್ರಶ್ನೆ.
ನನ್ನ ಸರಕಾರದಲ್ಲಿಯೂ ಈ ಅಧಿಕಾರಿ ಕೆಲಸ ಮಾಡಿದ್ದರು, ನಿಜ. ನಾನು ಇಲ್ಲವೆನ್ನುವುದಿಲ್ಲ. ಆದರೆ, ಊರು ಮೇಯೋಕೆ, ಸಿಕ್ಕಸಿಕ್ಕ ಕೊಚ್ಚೆಯಲ್ಲಿ ಉರುಳಾಡೋಕೆ, ಹೆದರಿಸಿ ಬೆದರಿಸಿ ಸುಲಿಗೆ ಮಾಡೋಕೆ ನಾನು ಬಿಟ್ಟಿರಲಿಲ್ಲ. ಹದ್ದುಬಸ್ತಿನಲ್ಲಿ ಇಟ್ಟು ಕೆಲಸ ಮಾಡಿಸಿದ್ದೆ. ನಿಮಗೆ ಅಂತಹ ಎದೆಗಾರಿಕೆ ಇದೆಯಾ ಕಾಂಗ್ರೆಸ್ಸಚಿವರೇ ಎಂದು ಪ್ರಶ್ನೆ ಮಾಡಿದ್ದಾರೆ. ಕಳಂಕಿತ ಅಧಿಕಾರಿಗಳಿಂದ ರಕ್ಷಣೆ ಪಡೆದುಕೊಳ್ಳುವ ನಿಮ್ಮ ನಿಕೃಷ್ಟ ಸ್ಥಿತಿ ನನಗೆ ಬಂದಿಲ್ಲ, ಬರುವುದೂ ಇಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.
ಅಷ್ಟಕ್ಕೂ ಚಂದ್ರಶೇಖರ್ ವಿರುದ್ಧ ಹೆಚ್ಡಿ ಕುಮಾರಸ್ವಾಮಿ ಗುಡುಗಲು ಕಾರಣ ಏನಂದ್ರೆ, ರಾಜಭವನದಿಂದ ಹೆಚ್ಡಿಕೆ ವಿರುದ್ಧದ ಕಡತ ಸೋರಿಕೆಯಾಗಿದೆ, ತನಿಖೆ ನಡೆಸಬೇಕು ಅಂತಾ ಎಡಿಜಿಪಿ ಚಂದ್ರಶೇಖರ್ ಪತ್ರ ಬರೆದಿದ್ದರು. ಇದನ್ನೇ ಮುಂದಿಟ್ಟು ಹೆಚ್ಡಿಕೆ ನಿನ್ನೆ ವಾಗ್ದಾಳಿ ನಡೆಸಿದ್ದರು.