ಹಾಸನ: ಚಾಲಕನ ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ದಂಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ತಾಲ್ಲೂಕಿನ, ದುದ್ದ ಹೋಬಳಿ, ಚೆನ್ನಮ್ಮನಹಳ್ಳಿ ಬಳಿ ನಡೆದಿದೆ. ಚೇತನ್ ಮತ್ತು ಸಂಗೀತಾ ಗಂಭೀರವಾಗಿ ಗಾಯಗೊಂಡ ದಂಪತಿ. ಗಾಯಾಳು ದಂಪತಿ ಮಂಡ್ಯ ಜಿಲ್ಲೆ,
Post Office Scheme: ಅಂಚೆ ಕಚೇರಿಯ ಈ ಯೋಜನೆಯಡಿ ಹೂಡಿಕೆ ಮಾಡಿದ್ರೆ 10 ವರ್ಷದಲ್ಲಿ ನಿಮ್ಮ ಹಣ ಡಬಲ್!
ಕಿಕ್ಕೇರಿ ಮೂಲದವರಾಗಿದ್ದು ಅತಿವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ದಂಪತಿ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುದ್ದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.