ಬೆಂಗಳೂರು: ಕುಮಾರಸ್ವಾಮಿ ವಿರುದ್ಧ ಪತ್ರದ ಮೂಲಕ ಹಂದಿಗೆ ಹೋಲಿಸಿ, ಚಂದ್ರಶೇಖರ್ ಟೀಕಿಸಿದ್ದಾರೆ. ಇದರಿಂದ ಕೇಂದ್ರ ಸಚಿವರಿಗೆ ಅಪಮಾನ ಮಾಡಲಾಗಿದೆ ಎಂದು ಚಂದ್ರಶೇಖರ್ ವಿರುದ್ದ ಕ್ರಮಕ್ಕೆ ಜೆಡಿಎಸ್ ರಾಜ್ಯ ಮುಖ್ಖಕಾರ್ಯದರ್ಶಿ ಶಾಲಿನಿ ರಜನೀಶ್ ಭೇಟಿ ಮಾಡಿ ದೂರು ನೀಡಿದೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ನೇತೃತ್ವದಲ್ಲಿ ದೂರು ನೀಡಿದ್ದು, ಕೇಂದ್ರ ಸಚಿವರನ್ನು ನಿಂದಿಸಿದ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.
ಏನಿದು ವಿವಾದ.?
ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿಗೆ ಪತ್ರದ ಮೂಲಕ ಸ್ಪಷ್ಟನೆ ಕೊಟ್ಟು ಎಡಿಜಿಪಿ ಚಂದ್ರಶೇಖರ್ ಕೌಂಟರ್ ಕೊಟ್ಟಿದ್ದರು. ಪತ್ರದಲ್ಲಿ ಜಾರ್ಜ್ ಬರ್ನಾರ್ಡ್ ಷಾ ಅವರ ಪ್ರಸಿದ್ಧ ಇಂಗ್ಲಿಷ್ ವಾಕ್ಯವನ್ನು ಉಲ್ಲೇಖಿಸಲಾಗಿದೆ. ಹಂದಿಗಳೊಂದಿಗೆ ಎಂದಿಗೂ ಜಗಳಕ್ಕೆ ಇಳಿಯಬೇಡಿ. ಹಂದಿಗಳ ಜೊತೆಗೆ ಜಗಳಕ್ಕೆ ಇಳಿದರೆ ನಾವು ಕೊಳಕಾಗುತ್ತೀವಿ. ಯಾಕೆಂದರೆ ಹಂದಿಗಳು ಕೊಳಕನ್ನೇ ಇಷ್ಟಪಡುತ್ತದೆ. ಆದರೆ ನಮ್ಮ ಕರ್ತವ್ಯವನ್ನು ನಾವು ನಿರ್ವಹಿಸುತ್ತೇವೆ. ಅಪರಾಧಿಗಳು ಮತ್ತು ಆರೋಪಿಗಳನ್ನು ಎದುರಿಸುವುದನ್ನು ನಾವು ತಪ್ಪಿಸಲು ಸಾಧ್ಯವಿಲ್ಲ.
ಗಮನಿಸಿ.. ವಿದ್ಯುತ್ ಬಿಲ್ ಪಾವತಿಸದವರಿಗೆ ಅ.1ರಿಂದ ವಿದ್ಯುತ್ ಸಂಪರ್ಕ ಕಟ್!
ಕೆಲವೊಮ್ಮೆ ನಾವು ಎದುರಿಸುವ ಅಪರಾಧಿಗಳು ಮತ್ತು ಆರೋಪಿಗಳು ನಮ್ಮ ಮೇಲೆ ಕೊಳಕು ಎಸೆಯುತ್ತಾರೆ. ನಮ್ಮ ಕರ್ತವ್ಯವನ್ನು ನಿರ್ವಹಿಸುವುದರಿಂದ ನಮ್ಮನ್ನು ತಡೆಯಬಾರದು. ಭರವಸೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಏಕೆಂದರೆ ಸತ್ಯವು ಯಾವಾಗಲೂ ಜಯಗಳಿಸುತ್ತದೆ. ಸತ್ಯ, ದೇವರು ಮತ್ತು ನಮ್ಮ ಕಾನೂನಿನಲ್ಲಿ ನಂಬಿಕೆ ಇರಲಿ. ಸತ್ಯಮೇವ ಜಯತೆ ಎಂದು ಪತ್ರದ ಮೂಲಕ ಎಡಿಜಿಪಿ ಚಂದ್ರಶೇಖರ್ ಸ್ಪಷ್ಟನೆ ನೀಡಿದ್ದರು.
ಇತ್ತ ಕರ್ನಾಟಕ ಬಿಜೆಪಿ ಕೂಡ ಕುಮಾರಸ್ವಾಮಿ ಬೆಂಬಲಕ್ಕೆ ನಿಂತಿದೆ. ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಕಳಂಕಿತ ಅಧಿಕಾರಿ ಎಂದು ಬಿಜೆಪಿ ಆರೋಪಿಸಿದೆ. ಲೋಕಾಯುಕ್ತ ತನಿಖೆ ಪಾರದರ್ಶಕವಾಗಿ ನಡೆಯುವ ನಂಬಿಕೆ ಇಲ್ಲ. ಸಿಬಿಐ ತನಿಖೆಯೇ ಆಗಬೇಕೆಂದು ಒತ್ತಾಯಿಸಲು ಬಿಜೆಪಿ ಮುಂದಾಗಿದೆ. ಕೇಂದ್ರ ಸಚಿವರ ವಿರುದ್ಧವೇ ಲೋಕಾಯುಕ್ತ ಎಡಿಜಿಪಿ ಮಾತನಾಡುತ್ತಾರೆ. ಮುಡಾ ಕೇಸ್ ತನಿಖೆಯಲ್ಲಿ ಪಾರದರ್ಶಕತೆ ನಿರೀಕ್ಷೆ ಇಲ್ಲ ಎಂದು ಸಿಬಿಐ ತನಿಖೆಗೆ ಆಗ್ರಹಿಸಲು ಬಿಜೆಪಿ ಮುಂದಾಗಿದೆ. ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಹೋರಾಟಕ್ಕೆ ವೇದಿಕೆ ಸಿದ್ಧಗೊಳಿಸಲಾಗುತ್ತಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.