ಬೆಂಗಳೂರು: ಊಟ ಮಾಡುವ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶ್ರೀನಿವಾಸನಗರ 11 ನೇ ಕ್ರಾಸ್ ನ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿತ್ತು. ಕೊಲೆಗೈದ ಆರೋಪಿಯನ್ನು ಬಂಧಿಸುವಲ್ಲಿ ಹನುಮಂತನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದು, ಹರೀಶ್ ಬಂಧಿತ ಆರೋಪಿಯಾಗಿದ್ದಾರೆ.
ಸೆಪ್ಟಂಬರ್ 24ರಂದು ಶ್ರೀನಿವಾಸನಗರದ 11ನೇ ಕ್ರಾಸ್ನ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಅಜಿತ್ (30) ಎಂಬಾತನ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈಯ್ಯಲಾಗಿತ್ತು. ಹತ್ಯೆಯಾಗಿರುವ ಅಜಿತ್ ಹಾಗೂ ಆರೋಪಿ ಹರೀಶ್ ಇಬ್ಬರು ಕೃತ್ಯ ನಡೆದಿದ್ದ ಕಟ್ಟಡದಲ್ಲಿಯೇ ಗಾರೆ ಕೆಲಸ ಮಾಡಿಕೊಂಡಿದ್ದರು.
Health Tips: ಕೆಂಪು ಸೇಬಿಗಿಂತ ಹಸಿರು ಸೇಬು ಹೆಚ್ಚು ಆರೋಗ್ಯಕರವಂತೆ! ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ..?
ಕುಳಿತುಕೊಂಡು ಊಟ ಮಾಡುವ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದು, ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿತ್ತು. ಅದೇ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಕಲ್ಲನ್ನು ಅಜಿತ್ ತಲೆ ಮೇಲೆ ಹರೀಶ್ ಎತ್ತಿಹಾಕಿ ಹತ್ಯೆಗೈದಿದ್ದ. ಇನ್ನೂ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದ ಹನುಮಂತ ನಗರ ಠಾಣೆ ಪೊಲೀಸರು ಸದ್ಯ ಆರೋಪಿ ಹರೀಶ್ನನ್ನು ಬಂಧಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.