ಬಳ್ಳಾರಿ: ಜಾಮೀನು ಪಡೆದು ಹೊರಗೆ ಬರಬೇಕು ಎಂದು ಕಾಯುತ್ತಿರುವ ನಟ ದರ್ಶನ್ಗೆ ಮತ್ತೆ ನಿರಾಸೆ ಆಗಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಮುಂದಕ್ಕೆ ಹಾಕಲಾಗಿದೆ. ಅಕ್ಟೋಬರ್ 4ರಂದು ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ. ಜಾಮೀನು ಅರ್ಜಿಯ ವಿಚಾರಣೆ ಮುಂದೂಡಿಕೆ ಬೆನ್ನಲ್ಲೇ ನಟ ದರ್ಶನ್ ಅವರನ್ನು ನೋಡಲು ಪತ್ನಿ ವಿಜಯಲಕ್ಷ್ಮಿ ಅವರು 6ನೇ ಬಾರಿ ಜೈಲಿಗೆ ಆಗಮಿಸಿದ್ದಾರೆ.
ದರ್ಶನ್ ನೋಡಲು ಜೈಲಿಗೆ ಭೇಟಿ ಕೊಟ್ಟಿರುವ ವಿಜಯಲಕ್ಷ್ಮಿ ಜೊತೆ ದಿನಕರ್ ತೂಗುದೀಪ, ನಟ ಧನ್ವೀರ್ ಗೌಡ, ವಿಜಯಲಕ್ಷ್ಮಿ ಅವರ ತಂಗಿಯ ಗಂಡ ಸುಶಾಂತ್ ನಾಯ್ಡು ಆಗಮಿಸಿದ್ದಾರೆ. ಈ ವೇಳೆ, ಎರಡು ಬ್ಯಾಗ್ಗಳಲ್ಲಿ ಬಟ್ಟೆ ಮತ್ತು ಬೇಕರಿ ತಿನಿಸುಗಳನ್ನು ತರಲಾಗಿದೆ.ವಿಜಯಲಕ್ಷ್ಮಿ ದರ್ಶನ್ ಭೇಟಿಗೆ ಆಗಮಿಸುತ್ತಿರುವ ಸುದ್ದಿ ತಿಳಿದು ಬಳ್ಳಾರಿ ಸೆಂಟ್ರಲ್ ಜೈಲಿನ ಮುಂದೆ ನೂರಾರು ಅಭಿಮಾನಿಗಳು ಸೇರಿದ್ದರು.
Health Tips: ಕೆಂಪು ಸೇಬಿಗಿಂತ ಹಸಿರು ಸೇಬು ಹೆಚ್ಚು ಆರೋಗ್ಯಕರವಂತೆ! ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ..?
ದರ್ಶನ್ ಅವರಿಗೆ ಬೇಲ್ ಸಿಗ್ತಿಲ್ಲ ಎನ್ನುವ ಬೇಸರ ವಿಜಯಲಕ್ಷ್ಮಿ ಅವರ ಮುಖದಲ್ಲಿತ್ತು. ಪ್ರತಿ ವಾರ ಕೂಡ ದರ್ಶನ್ ನೋಡಲು ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ ಬರುತ್ತಿದ್ದಾರೆ. ದರ್ಶನ್ ಪರ ಕಾನೂನು ಹೋರಾಟ ಮಾಡ್ತಿರುವ ವಿಜಯಲಕ್ಷ್ಮಿ ಹಲವು ದೇವಾಲಯಗಳಿಗೂ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ರು.
ಇನ್ನೂ ಇದೇ ಪ್ರಕರಣದಲ್ಲಿ ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್ ಹಾಗೂ ನಿಖಿಲ್ ನಾಯಕ್ ತುಮಕೂರು ಜೈಲಿನಲ್ಲಿ ಇದ್ದಾರೆ. ಈ ಮೂವರಿಗೆ ಒಂದು ವಾರದ ಹಿಂದೆಯೇ ಜಾಮೀನು ನೀಡಲಾಗಿತ್ತು. ಆದರೆ ಇಷ್ಟು ದಿನ ಕಳೆದರೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಜಾಮೀನಿಗೆ ಸಂಬಂಧಿಸಿದ ಕಾನೂನು ಪ್ರಕ್ರಿಯೆ ಮುಗಿಯದ ಹಿನ್ನೆಲೆಯಲ್ಲಿ ಈ ಮೂವರು ಇನ್ನೂ ಕೂಡ ಜೈಲಿನಲ್ಲೇ ಕಾಲ ಕಳೆಯುತ್ತಿದ್ದಾರೆ. ಬಿಡುಗಡೆ ಮಾಡಲು ಶ್ಯೂರಿಟಿ ಸಮಸ್ಯೆ ಆಗುತ್ತಿದೆ ಎನ್ನಲಾಗಿದೆ.