ಬೆಂಗಳೂರು: ಅಸ್ಸಾಂ ಎನ್ಐಎ ಅಧಿಕಾರಿಗಳಿಂದ ಬೆಂಗಳೂರು ಗ್ರಾಮಾಂತರದ ಜಿಗಣಿಯಲ್ಲಿ ಬಂಧಿತನಾಗಿದ್ದ ಉಲ್ಫಾ ಉಗ್ರನಿಂದ ಸ್ಫೋಟಕ ರಹಸ್ಯವೊಂದು ಬಯಲಾಗಿದೆ. ಶಂಕಿತ ಉಗ್ರನ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿರುವ ಎನ್ಐಎ ಅಧಿಕಾರಿಗಳು ಮಂಗಳವಾರ ಅಸ್ಸಾಂನ ಉತ್ತರ ಲಖೀಂಪುರದಲ್ಲಿ ಜೀವಂತ ಐಇಡಿಗಳನ್ನ (ಸುಧಾರಿತ ಸ್ಫೋಟಕ ಸಾಧನ) ವಶಕ್ಕೆ ಪಡೆದಿದ್ದಾರೆ.ಎನ್ಐಎ ಅಧಿಕಾರಿಗಳ ವಿಚಾರಣೆ ವೇಳೆ ಶಂಕಿತ ಉಗ್ರ ಗಿರಿಸ್ ಬೋರಾ ಅಲಿಯಾಸ್ ಗೌತಮ್,
Gandhi Jayanti 2024: ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿ ಬಗ್ಗೆ ನೀವು ಅರಿಯಲಾರದ ಕೆಲವು ಸಂಗತಿಗಳು ಇಲ್ಲಿವೆ ನೋಡಿ.!
ಅಸ್ಸಾಂನಲ್ಲಿ ಐಇಡಿ ಇಟ್ಟ ಸ್ಫೋಟಕ ವಿಚಾರ ಬಾಯ್ಬಿಟ್ಟಿದ್ದಾನೆ. ಅಲ್ಲದೇ ಉಲ್ಫಾ(I) ಸಂಘಟನೆಯ ನಾಯಕರು ಹೇಳಿದಂತೆ ಐಇಡಿಗಳನ್ನ ಇಟ್ಟಿದ್ದೆ. ಆಗಸ್ಟ್ 15ರಂದು ಸ್ಫೋಟಿಸಲು ಸಂಜು ರೂಪಿಸಲಾಗಿತ್ತು ಎಂದೂ ಸಹ ಒಪ್ಪಿಕೊಂಡಿದ್ದಾನೆ. ಶಂಕಿತ ಉಗ್ರನ ಮಾಹಿತಿ ಮೇರೆಗೆ ತನಿಖೆ ನಡೆಸಿದ ಎನ್ಐಎ ಅಧಿಕಾರಿಗಳು ಲಖೀಂಪುರ ಜಿಲ್ಲೆಯಲ್ಲಿ ಇಟ್ಟಿದ್ದ ಕೆಲವು ಜೀವಂತ ಐಇಡಿಗಳನ್ನ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ತನಿಖೆಯನ್ನೂ ಮುಂದುವರಿಸಿದ್ದಾರೆ.