ಬೆಂಗಳೂರು: ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ನಲ್ಲಿ 200ನೇ ಕಿತ್ತೂರು ವಿಜಯೋತ್ಸವ ಆಚರಣೆ ಕಾರ್ಯಕ್ರಮಕ್ಕೆ ಇಂದು ಸಿಎಂ ಚಾಲನೆ ನೀಡಿದರು. ಈ ವೇಳೆ ಜ್ಯೋತಿ ಬೆಳಗುವ ವೇಳೆ ಸಿಎಂ ಸಿದ್ದರಾಮಯ್ಯ ಅವರ ಬಟ್ಟೆಗೆ ಬೆಂಕಿಯ ಬಿಸಿ ತಾಗಿದ ಘಟನೆ ನಡೆದಿದೆ. ಕಿತ್ತೂರು ಉತ್ಸವ ಜ್ಯೋತಿಗೆ ಚಾಲನೆ ನೀಡಿದ ಬಳಿಕ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಜಾಗ ಬಿಡಲು ಸಿಎಂ ಮುಂದಾದರು.
Tamarind Seed Benefits: ಹುಣಸೆ ಬೀಜದ ಆರೋಗ್ಯಕಾರಿ ಪ್ರಯೋಜನಗಳು ಒಂದೇ ಎರಡೇ..? ಇಲ್ಲಿದೆ ನೋಡಿ
ಈ ವೇಳೆ ಸಿಎಂ ದೀಪದ ಹತ್ತಿರ ಬಂದಾಗ ಎಡಕೈಗೆ ಬೆಂಕಿಯ ಕಿಡಿ ತಾಗಿದೆ. ಬಟ್ಟೆಗೆ ಆಕಸ್ಮಿಕವಾಗಿ ತಾಕಿದ ಕಿಡಿಯನ್ನು ಕೂಡಲೇ ಭದ್ರತಾ ಸಿಬ್ಬಂದಿ ಆರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆಶಿವಕುಮಾರ್, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಎಚ್.ಕೆ. ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಸೇರಿ ಹಲವರು ಉಪಸ್ಥಿತರಿದ್ದರು.