ಹುಬ್ಬಳ್ಳಿ: ಅದೊಂದು ವೈದ್ಯಕೀಯ ಲೋಕಕ್ಕೆ ಸವಾಲು ಎಸಗುವ ಚಿಕಿತ್ಸೆ. ಇದನ್ನ ಹುಬ್ಬಳ್ಳಿಯಕೆಎಂಸಿಆರ್ಐ ವೈದ್ಯರು ಸವಾಲಾಗಿ ತೆಗೆದುಕೊಂಡು ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿ ಬೇಸ್ ಎನಿಸಿಕೊಂಡಿದ್ದಾರೆ. ಅದು ಯಾವ ಚಿಕಿತ್ಸೆ ಎಂತಹ ಚಿಕಿತ್ಸೆ ಅಂತಾನಾ ನೀವೇ ನೋಡಿ ಸ್ಟೋರಿ…
ಅದೊಂದು ಭಯಾನಕ ಅಪಘಾತ. ಬೇರೆ ಅಂತಹ ಹೇಳಿಕೊಳ್ಳುವ ವಾಹನ ಗುಜ್ಜು ನುಜ್ಜು ಆಗಿಲ್ಲ. ಆದರೆ ಏನಾಯಿತು ಗೊತ್ತಾಲಾರಿ ಕ್ಲೀನರ್ ಎದೆ ಸೀಳಿದ್ದ 98ಸೆಂ.ಮೀ. ಪೈಪ್ .ಆ ಪೈಪ್ ಎದೆಗೆ ಹೋದ ದೃಶ್ಯ ಎಂತವರನ್ನ ಸಹ ಬೆರಗಾಹುಸುತ್ತದೆ. ಇಂತಹ ಪೈಪ್ ನ್ನ ಅತ್ಯಂತ ಯಶಸ್ವಿಯಾಗಿ ಹೊರ ತೆಗೆಯುವಲ್ಲಿ ಇಲ್ಲಿಯ ಕೆಎಂಸಿಆರ್ಐ ವೈದ್ಯರು ಯಶಸ್ವಿಯಾಗಿದ್ದಾರೆ.
ಹಾವೇರಿ ಜಿಲ್ಲೆಯರಾಣೆಬೆನ್ನೂರಿನ ಹೂಲಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅ. 2ರಂದು ಬೆಳಗ್ಗೆ 4ಗಂಟೆಗೆ ಲಾರಿ ಮುಗುಚಿ ಬಿದ್ದು ಕ್ಲೀನರ್ ಹಾಗೂ ಶಿರಸಿಯ ಜವಳಮಕ್ಕಿ ಗ್ರಾಮದ ದಯಾನಂದ ಶಂಕರಬಡಗಿ (27) ಅವರ ಎದೆ ಸೀಳಿ ಸರ್ವಿಸ್ ರಸ್ತೆಯ ಕಬ್ಬಿಣದ ಪೈಪ್ ಹೊರ ಬಂದಿತ್ತು. ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ತಜ್ಞ ವೈದ್ಯರಿಲ್ಲವೆಂದು ಹುಬ್ಬಳ್ಳಿಯ ಕೆಎಂಸಿಆರ್ಐನ ತುರ್ತು ಚಿಕಿತ್ಸಾ ಘಟಕಕ್ಕೆ ಕರೆ ತರಲಾಗಿತ್ತು.
ಘಟಕದ ಮುಖ್ಯಸ್ಥ ಡಾ. ನಾಗರಾಜ ಚಾಂದಿ ಅವರು ಅಪಾಯವರಿತು ತುರ್ತು ಚಿಕಿತ್ಸೆ ನೀಡಿ ಹಿರಿಯ ವೈದ್ಯರ ಗಮನಕ್ಕೆ ತಂದರು. ಶೀಘ್ರವೇ ಶಸ್ತ್ರ ಚಿಕಿತ್ಸೆ ನಡೆಸಲು ತೀರ್ಮಾನ ಕೈಗೊಳ್ಳಲಾಯಿತು.
ಈ ಕುರಿತು ಶಸ್ತ್ರ ಚಿಕಿತ್ಸಾ ವಿಭಾಗದ ಸಿ ಯುನಿಟ್ ಮುಖ್ಯಸ್ಥ ಡಾ. ರಮೇಶ ಹೊಸಮನಿ ಹಾಗೂ ಕಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ. ಕಮ್ಮಾರ ಯಾವ ರೀತಿ ಚಿಕಿತ್ಸೆ ನೀಡಲಾಯಿತು ಅಂತಾ ಮಾಹಿತಿ ನೀಡಿದರು
ವಿಕಿರಣಶಾಸ್ತ್ರ ವಿಭಾಗದಲ್ಲಿ ಅಲ್ಮಾಸೌಂಡ್ ತಪಾಸಣೆ ನಡೆಸಿ ಹೃದಯ ಹಾಗೂ ಪ್ರಮುಖ ರಕ್ತನಾಗಳಿಗೆ ಯಾವುದೇ ಹಾನಿಯಾಗಿಲ್ಲವೆಂದು ಡಾ. ವೀಣಾ ಮರಡಿ ಅವರು ನೀಡುತ್ತಾರೆ (ಪೈಪ್ ಅಡ್ಡಿಯಾದ ಹಿನ್ನೆಲೆಯಲ್ಲಿ ಸಿಸಿ ಸ್ಕ್ಯಾನ್ ಮಾಡಲಾಗಲಿಲ್ಲ). ವಿವಿಧ ವಿಭಾಗದ ಡಾ. ವಿಜಯ ಕಾಮತ್, ಡಾ. ವಿನಾಯಕ ಬ್ಯಾಟೆಪ್ಪನವರ, ಡಾ. ವಸಂತ ತೆಗ್ಗಿನಮನಿ, ಹೃದ್ರೋಗ ಶಸ್ತ್ರಚಿಕಿತ್ಸಕ ಡಾ. ಕೋಬಣ್ಣ ಕಟ್ಟಿಮನಿ, ಡಾ. ಧರ್ಮೇಶ ಲದ್ದಡ ನೇತೃತ್ವದ ವೈದ್ಯಕೀಯ ತಂಡವು ಮಧ್ಯಾಹ್ನ 2ರಿಂದ 4.30ರವರೆಗೆ ಶಸ್ತ್ರ ಚಿಕಿತ್ಸೆ ಪ್ರಕ್ರಿಯೆ ನಡೆಸಿದೆ.
‘
ಎದೆ ಮೂಳೆ ಕೆಲವೆಡೆ ಮುರಿದಿತ್ತು. ಶ್ವಾಸಕೋಶ ಹಾನಿಯಾಗಿತ್ತು. ಎದೆ ಹಿಂಭಾಗದಿಂದ ಹೊರಬಂದಿರುವ ಪೈಪ್ನೊಂದಿಗೆ ಸಣ್ಣ ಕೊಂಡಿಯೂ ಇತ್ತು. ಹೃದಯದ ಸನಿಹವೇ ಪೈಪ್ ಹಾದು ಹೋಗಿತ್ತು. ಇದೆಲ್ಲವನ್ನೂ ಬಹು ಎಚ್ಚರಿಕೆಯಿಂದ ನಿಭಾಯಿಸಿ 98 ಸೆಂ.ಮೀ. ಪೈಪ್ ಎದೆಯಿಂದ ಹೊರ ತೆಗೆಯಲಾಗಿದೆ’. ಈಗ ಸ್ವಲ್ಪ ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನೆರಡು ದಿನ ತೀವ್ರ ನಿಗಾ ಘಟಕದಲ್ಲಿ ಇರಲಿದ್ದಾರೆ. ಅಗತ್ಯ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. ತದನಂತರ ಡಿಸ್ಟಾರ್ಜ್ ಮಾಡಲಾಗುವುದು ಎನ್ನಲಾಗಿದೆ.
ಇದೇ ವೇಳೆ ಚಿಕಿತ್ಸೆ ಪಡೆಯುತ್ತಿರುವ ಸ್ನೇಹಿತ ನಾಯಕ ಹಾಗೂ ಲಾರಿ ಚಾಲಕ ಶಿವಾನಂದ ಘಟನೆ ನಡೆದ ಬಗ್ಗೆ ಹೇಳಿದ್ದು ಹೀಗೆ.
ಶುಲ್ಕ ರಹಿತ ಚಿಕಿತ್ಸೆ ನೀಡಲಾಗಿದ್ಧು. 7 ಬಾಟಲ್ ರಕ್ತ ನೀಡಲಾಗಿದೆ. ರಜೆ ದಿನವೂ ನಮ್ಮ ವೈದ್ಯಕೀಯ ತಂಡ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನೆರವೇರಿಸಿದೆ. ಅದೂ ಕ್ಲಿಷ್ಟಕರವಾದದು ಎಂಬುದು ಗಮನಾರ್ಹ.