ಹುಬ್ಬಳ್ಳಿ:ಭಾರತೀಯ ಜನತಾ ಪಕ್ಷಕ್ಕೆ ಮರಳಿ ಸೇರ್ಪಡೆಗೆ ಆಹ್ವಾನ ನೀಡಿದರೆ ಮರು ಸೇರ್ಪಡೆಗೆ ಸಿದ್ಧ ಎಂದು ಮಾಜಿ ಶಾಸಕ ರಘುಪತಿ ಭಟ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು. ಮರಳಿ ಬಿಜೆಪಿ ಸೇರ್ಪಡೆಯ ಇಂಗಿತ ವ್ಯಕ್ತಪಡಿಸಿರುವ ಅವರು, ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪನರನ್ನ ಮರಳಿ ಬಿಜೆಪಿಗೆ ಸೇರ್ಪಡೆಗೆ ಚಿಂತನೆ ನಡೆದಿದ್ದು ನನ್ನ ಕರೆದರೂ ಹೋಗುವೆ ನನಗೆ ಯಾವುದೇ ಸಮಸ್ಯೆ ಇಲ್ಲ.
ಖಂಡಿತವಾಗಿಯೂ ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ಆಗಿದ್ದೇನೆ. ಚುನಾವಣೆಯಲ್ಲಿ ಸೋಲಿಲಿ ಬಿಡಲಿ ಬಿಜೆಪಿ ಕಾರ್ಯಕರ್ತನಾಗಿ ಇರುವೆ ಎಂದು ಆವಾಗಲೇ ಹೇಳಿದ್ದೆ. ಈಗಲೂ ಹಾಗೇ ಇದ್ದೇನೆ ಎಂದರು. ಬಿಜೆಪಿಯಲ್ಲಿ ಅತೃಪ್ತಿ ನಾಯಕರ ಸಭೆ, ಗಂಗಾ ಜಲದಿಂದ ಬಿಜೆಪಿ ಶುದ್ಧೀಕರಣ ಮಾಡಬೇಕು ಎಂಬ ವಿಚಾರ* ಈ ವಿಚಾರವಾಗಿ ಒಬ್ಬಬ್ಬರದು ಒಂದು ಅಭಿಪ್ರಾಯ ಇರುತ್ತದೆ.
ನಾನು ಚುನಾವಣಗೆ ಸ್ಪರ್ಧೆ ಮಾಡುವಾಗ ಬಿಜೆಪಿ ಬಗ್ಗೆ ನನ್ನ ಅಭಿಪ್ರಾಯ ಹೇಳಿದ್ದೆ. ಆದರೆ, ನಾನು ರಾಷ್ಟ್ರೀಯ ವಿಚಾರ ಇರಿಸಿಕೊಂಡು ರಾಜಕಾರಣ ಮಾಡಿದವನುನನಗೆ ಪಕ್ಷದಿಂದ ಉಚ್ಚಾಟನೆ ಆಗಿದ್ದುಮರಳಿ ಕರೆದರೆ ಖಂಡಿತವಾಗಿಯೂ ಹೋಗುವೆ ನೋಡಿ ಈಗ ನಾನುಈಗ ರಾಜಕಾರಣಕ್ಕೆ ಸ್ವಲ್ಪ ವಿರಾಮ ಹೇಳಿ ಧಾರ್ಮಿಕ ಕಾರ್ಯಕ್ರಮ ಮಾಡಿಕೊಂಡು ಇದ್ದೇನೆ . ಹೆಚ್ಚು ನೆಮ್ಮದಿಯಲ್ಲಿ ಈಗ ಇದ್ದೇನೆ ಎಂದರು.