ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಎಲೆಕ್ಟ್ರಾನಿಕ್ ಸಿಟಿ ಮತ್ತೆ ಜಲಾವೃತವಾಗಿದೆ.
ಮಾರ್ಕೆಟ್, ಮೆಜೆಸ್ಟಿಕ್, ಮಲ್ಲೇಶ್ವರ, ಯಶವಂತಪುರ, ಎಲೆಕ್ಟ್ರಾನಿಕ್ ಸಿಟಿ, ಮಹದೇವಪುರ ವಲಯಗಳಲ್ಲಿ ಭಾರೀ ಮಳೆಯಾಗ್ತಿದೆ.
Virat Kohli ರನ್ ಮಷಿನ್ ವಿರಾಟ್ ಕೊಹ್ಲಿಯ ವಿಶ್ವ ದಾಖಲೆ ಮುರಿಯಲು ಸಜ್ಜಾದ ಸೂರ್ಯ!
ಶನಿವಾರವೂ ವಿವಿಧೆಡೆ ಸುರಿದ ಮಳೆಗೆ ಬೆಂಗಳೂರು ತತ್ತರಿಸಿಹೋಗಿದೆ. ಮಳೆಯ ಹೊಡೆತಕ್ಕೆ ರಸ್ತೆ ಮೇಲೆಲ್ಲಾ ನೀರು ನಿಂತಿತ್ತು. ಎಲೆಕ್ಟ್ರಾನಿಕ್ ಸಿಟಿ ಟೋಲ್ ಬಳಿ ರಸ್ತೆ ತುಂಬೆಲ್ಲಾ ನೀರು ನಿಂತಿತ್ತು. ವಾಹನ ಸವಾರರು ಗಂಟೆಗಟ್ಟಲೇ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದ ವೀಕೆಂಡ್ ಮೂಡ್ನಲ್ಲಿದ್ದ ಜನರಿಗೆ ಮಳೆ ಎಫೆಕ್ಟ್ ತಟ್ಟಿದೆ. ಹಲವಡೆ ಸಂಜೆ ಸುರಿದ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ಥಗೊಂಡಿತ್ತು. ಹವಾಮಾನ ಇಲಾಖೆ ಅಕ್ಟೋಬರ್ ಮೊದಲ ವಾರದಲ್ಲೇ ಮಳೆ ಎಚ್ಚರಿಕೆ ನೀಡಿತ್ತು. ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ಬೆಂಗಳೂರು ನಗರದಲ್ಲಿ ಜೋರು ಮಳೆ ಆಗಿದೆ.
ಬೆಂಗಳೂರಿನಲ್ಲಿ ಸುರಿದ ಸಣ್ಣ ಮಳೆಗೆ ಎಲೆಕ್ಟ್ರಾನಿಕ್ ಸಿಟಿ ಅಕ್ಷರಶಃ ತತ್ತರಿಸಿದೆ, ಐಟಿ ಬಿಟಿ ಮಂದಿ ಪರದಾಡುವ ಪರಿಸ್ಥಿತಿಯೂ ನಿರ್ಮಾಣವಾಗಿತ್ತು. ಹೊಸೂರು ಬೆಂಗಳೂರು ಮುಖ್ಯರಸ್ತೆಯ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸುಮಾರು ಅರ್ಧ ಕಿಮೀ ರಸ್ತೆ ವರೆಗೆ ಮಳೆ ನೀರು ತುಂಬಿಕೊಂಡಿತ್ತು. ಪುರಭವನ, ಬಿಬಿಎಂಪಿ ಸರ್ಕಲ್, ಕೆ.ಆರ್ ಮಾರ್ಕೇಟ್, ಮೆಜೆಸ್ಟಿಕ್ ಸುತ್ತಮುತ್ತ ಭಾರೀ ಮಳೆಯಾಗಿದ್ದು, ರಸ್ತೆಗಳು ಕೆರೆಯಂತಾಗಿರುವ ವಾತಾವರಣ ಕಂಡುಬಂದಿತು.