ಬಾಗಲಕೋಟೆ: ಹೊಸೂರ ನಗರದ ಇತಿಹಾಸದಲ್ಲಿ ಪ್ರಥಮ ಬಾರಿಗೆ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರ ಪಟ್ಟ ಸಿಕ್ಕಿರುವುದು ನನಗೆ ಮತ್ತು ನಮ್ಮೂರಿನ ಜನತೆಗೆ ಸಂತೋಷ ತಂದಿದೆ ಹಾಗಾಗಿ ನಾಳೆ ಬೆಳಿಗ್ಗೆ 9:00 ಗಂಟೆಗೆ ಪ್ರಾಧಿಕಾರದ ಕಚೇರಿಯಲ್ಲಿ ಅಧಿಕಾರವನ್ನು ಸ್ವೀಕರಿಸುತ್ತಿದ್ದೇನೆ ಅಧಿಕಾರ ಸ್ವೀಕರಿಸಿದ ತಕ್ಷಣದಿಂದಲೇ ರಬಕವಿ ಬನಹಟ್ಟಿ ರಾಂಪುರ ಹೊಸೂರ ನಗರದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ನೂತನ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವೆಂಕನಗೌಡ ಪಾಟೀಲ ಹೇಳಿದರು.
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿಯ ನಿರೀಕ್ಷಣಾ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿದರು
ನೂತನವಾಗಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವೆಂಕನಗೌಡ ಪಾಟೀಲ್ ಅವರು ನಾಳೆ ಬೆಳಿಗ್ಗೆ 9:00ಗೆ ಬನಹಟ್ಟಿಯ ಪ್ರಾಧಿಕಾರ ಕಚೇರಿಯಲ್ಲಿ ಪದಗ್ರಹ ನಡೆಯಲಿದ್ದು.
ಈ ಕಾರ್ಯಕ್ರಮದಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಈ ಕಾರ್ಯಕ್ರಮವನ್ನು ಯಶಸ್ಸು ಮಾಡಿಕೊಡಬೇಕೆಂದು ಕಾಂಗ್ರೆಸ್ ಪಕ್ಷದ ಮುಖಂಡರಾದ ಭೀಮಶಿ ಮಗದುಮ್ ಹೇಳಿದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಸತ್ಯಪ್ಪ ಮಗದುಮ. ಲಕ್ಷ್ಮಣ್ ದೇಸಾರಟ್ಟಿ. ರಾಜು ಭದ್ರಣ್ಣವರ. ಮಲ್ಲಪಾ ಸಿಂಗಾಡಿ. ರಾಹುಲ ಕಲಾಲ. ಸೇರಿದಂತೆ ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಪ್ರಕಾಶ ಕುಂಬಾರ
ಬಾಗಲಕೋಟೆ