ಕೊಲ್ಕತ್ತಾ: ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ ಸಂಭವಿಸಿ ಏಳು ಮಂದಿ ಸಾವನ್ನಪಿದ್ದು, ಹಲವರು ಗಾಯಗೊಂಡಿರುವ ಘಟನೆ ಇಂದು ಪಶ್ಚಿಮ ಬಂಗಾಳದ ಬೀರ್ ಭೂಮ್ ಜಿಲ್ಲೆಯಲ್ಲಿ ನಡೆದಿದೆ. ಬೀರ್ ಭೂಮ್ನ ಲೋಕಪುರ ಪ್ರದೇಶದಲ್ಲಿರುವ ಗಂಗಾರಾಮ್ಚಕ್ ಮೈನಿಂಗ್ ಪ್ರೈವೇಟ್ ಲಿಮಿಟೆಡ್ ಗಣಿಗಾರಿಕೆಯಲ್ಲಿ ಈ ಸ್ಫೋಟ ಸಂಭವಿಸಿದೆ.
Jio Air Fiber: ಗ್ರಾಹಕರಿಗೆ ಭರ್ಜರಿ ರಿಯಾಯಿತಿ ಘೋಷಿಸಿದ ಜಿಯೊ! ದೀಪಾವಳಿಗೆ ಡಬಲ್ ಧಮಾಕಾ ಆಫರ್ ಘೋಷಣೆ
ಕಲ್ಲಿದ್ದಲು ಪುಡಿ ಮಾಡುವ ವೇಳೆಯಲ್ಲಿ ಸ್ಫೋಟ ಸಂಭವಿಸಿದ್ದು, ದುರಂತದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಘಟನೆಯ ನಡೆದ ಸ್ಥಳಕ್ಕೆ ಸ್ಥಳೀಯ ಪೊಲೀಸರು ಧಾವಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ವೈದ್ಯಕೀಯ ಆಸ್ಪತ್ರೆಗೆ ರವಾನಿಸಿದರು.