ಬೆಂಗಳೂರು: ಸಿಎಂ ರಾಜೀನಾಮೆ ಕೊಡುವ ಕಾಲ ಸನ್ನಿಹಿತವಾಗಿದೆ. ಯಾವ ಸಂದರ್ಭದಲ್ಲಿ ಬೇಕಾದರೂ ರಾಜೀನಾಮೆ ಕೊಟ್ಟೇ ಕೊಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ (BY Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗಿಂದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ (Siddaramaiah) ರಾಜೀನಾಮೆಗೆ ಕ್ಷಣಗಣನೆ ಎಂಬ ಹೇಳಿಕೆ ಹಿನ್ನೆಲೆ ಕುರಿತ ಪ್ರಶ್ನೆಗೆ ಉತ್ತರಿಸಿದರು. ಸಾಕಷ್ಟು ಜನ ಸಚಿವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡುತ್ತಿದ್ದಾರೆ. ಡಿ.ಕೆ ಶಿವಕುಮಾರ್ (DK Shivakumar) ಅವರು ಪಾಪ ಏನೋ ಪ್ಲಾನ್ ಜೊತೆ ಖರ್ಗೆಯವರ ಮನೆಗೆ ಹೋಗಿದ್ದರು. ಬರೇ ಬಿಲ್ಡಿಂಗ್ ಫೋಟೊ ಕಾಣುತ್ತಿತ್ತು. ಅದೇನು ಪ್ಲಾನ್ ಎಂದು ಗೊತ್ತಾಗಿಲ್ಲ ಎಂದು ವ್ಯಂಗ್ಯವಾಡಿದರು.
ವಿಜಯೇಂದ್ರ ಅವರು ಸಿಎಂ ಕನಸು ಕಾಣುತ್ತಿದ್ದಾರೆ. ಹಾಗಾಗಿ ಸರ್ಕಾರ ಪತನಕ್ಕೆ ಷಡ್ಯಂತ್ರ ನಡೆಸುತ್ತಿದ್ದಾರೆ ಎಂಬ ಮಾತುಗಳಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕನಸು ಕಾಣುವ ಸಂದರ್ಭ ಬಂದರೆ ಹೇಳುವೆ, ಸದ್ಯಕ್ಕೆ ಬೇಡ ಎಂದು ನಗುತ್ತಾ ತಿಳಿಸಿದರು.