ಧಾರವಾಡ: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯ್ತಿಗಳ ಸಿಬ್ಬಂದಿ ಹಾಗೂ ಪಿಡಿಓಗಳು ಧಾರವಾಡ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ರಾಜ್ಯದ ಎಲ್ಲ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳ ಹುದ್ದೆಯನ್ನು ಗೆಜೆಟೆಡ್ ಗ್ರೂಪ್ ಬಿ ದರ್ಜೆಗೆ ಏರಿಸಬೇಕು, ಏಳು ವರ್ಷ ಪೂರೈಸಿದ ಪಿಡಿಓಗಳನ್ನು ವರ್ಗಾವಣೆ ಮಾಡುವ ಪ್ರಕ್ರಿಯೆ ಕೈ ಬಿಡಬೇಕು,
ಪಿಡಿಓಗಳ ಜೇಷ್ಠತಾ ಪಟ್ಟಿಯನ್ನು ಕೂಡಲೇ ಅಂತಿಮಗೊಳಿಸಿ ಬಡ್ತಿ ನೀಡಲು ಕ್ರಮ ಕೈಗೊಳ್ಳಬೇಕು, ಎನ್ಆರ್ಜಿ ಯೋಜೆನಗಳನ್ನು ಅನುಷ್ಠಾನಪಡಿಸುವಲ್ಲಿ ಗುರಿಯನ್ನು ನಿಗದಿ ಮಾಡಬೇಕು ಎಂದು ಸುಮಾರು 10 ಕ್ಕೂ ಹೆಚ್ಚು ಬೇಡಿಕೆಗಳನ್ನಿಟ್ಟು ಪ್ರತಿಭಟನಾಕಾರರು ಸರ್ಕಾರಕ್ಕೆ ಒತ್ತಾಯ ಮಾಡಿದರು.
Jio Air Fiber: ಗ್ರಾಹಕರಿಗೆ ಭರ್ಜರಿ ರಿಯಾಯಿತಿ ಘೋಷಿಸಿದ ಜಿಯೊ! ದೀಪಾವಳಿಗೆ ಡಬಲ್ ಧಮಾಕಾ ಆಫರ್ ಘೋಷಣೆ
ಮೊನ್ನೆಯಷ್ಟೇ ರಾಜ್ಯದ ಎಲ್ಲ ಪಂಚಾಯ್ತಿ ಸಿಬ್ಬಂದಿ, ಪಿಡಿಓಗಳು ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದ್ದರು. ಈಗ ಜಿಲ್ಲಾ ಹಂತದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಧಾರವಾಡ ಜಿಲ್ಲಾ ಪಂಚಾಯ್ತಿ ಎದುರು ಪ್ರತಿಭಟನೆ ನಡೆಸಿದ ನಂತರ ಜಿಲ್ಲಾಧಿಕಾರಿ ಕಚೇರಿ ಎದುರೂ ಧರಣಿ ನಡೆಸಿದರು.