ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂದು ಗಂಟೆ, ಎರಡು ಗಂಟೆ ಮಳೆ ಬಂತು ಎಂದರೆ ಬೆಂಗಳೂರಿಗರು ನರಕ ಅನುಭವಿಸುತ್ತಾರೆ. ಶನಿವಾರ ಬೆಂಗಳೂರಿನಲ್ಲಿ 115 ಮಿ.ಮೀ ಮಳೆ ಆಗಿತ್ತು. ಬೆಂಗಳೂರಿನ 43ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಜೋರು ಮಳೆ ಆಗಿತ್ತು.
ಟೀಚಿಂಗ್ ನಲ್ಲಿ ಆಸಕ್ತಿ ಇದೆಯಾ!? ಕನ್ನಡ ಉಪನ್ಯಾಸಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ!
ಗಾಂಧಿ ನಗರ ವಿಧಾನಸಭಾ ಕ್ಷೇತ್ರ, ಯಲಹಂಕ ಸೇರಿದಂತೆ ಹಲವು ಕಡೆ ಮಳೆಯಾಗಿ 60ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿತ್ತು. ಈಗ ಪಾಲಿಕೆ ಮಳೆಯಿಂದ ಆದ ಹಾನಿಗೆ ಪರಿಹಾರ ನೀಡಲು ನಿರ್ಧರಿಸಿದೆ.
60 ಮನೆಗಳನ್ನು ಗುರುತು ಮಾಡಿದ್ದು,
ಪ್ರತಿ ಮನೆಗೆ 10 ರಿಂದ 15 ಸಾವಿರ ಪರಿಹಾರ ನೀಡಲು ಮುಂದಾಗಿದೆ.
ಇನ್ನೂ ಬಿಬಿಎಂಪಿ ಪಶ್ಚಿಮ ವಲಯ, ಯಲಹಂಕ ವಲಯದಲ್ಲಿ ಹೆಚ್ಚು ಹಾನಿಯಾಗಿದೆ ಎಂದು ಹೇಳಲಾಗುತ್ತಿದೆ. ಮನೆಗೆ ನೀರು ನುಗ್ಗಿ 48 ಗಂಟೆಗಳ ಕಾಲ ಜನ ಸಮಸ್ಯೆಗೆ ಒಳಗಾಗುತ್ತಿದ್ದರೆ ಪರಿಹಾರಕ್ಕೆ ಅರ್ಹರು ಎಂದು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತಿದೆ. ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಮುಳುಗಡೆ ಸಂಬಂಧ ನೀರು ಹಾದು ಹೋಗಲು ಹೊಸ ಕಾಲುವೆ ನಿರ್ಮಾಣಕ್ಕೆ ಚಿಂತನೆ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿಕೆ ಕೊಟ್ಟಿದ್ದಾರೆ.