ಮಂಡ್ಯ:- ನಾಗಮಂಗಲ ಗಲಭೆಗೆ ಮೆಗಾ ಟ್ವಿಸ್ಟ್ ಸಿಕ್ಕಿದ್ದು, ದೂರು ನೀಡಿದ್ದ ಪಿಎಸ್ಐ ಸಸ್ಪೆಂಡ್ ಮಾಡಲಾಗಿದೆ.
ನಾಗಮಂಗಲ ಕೋಮುಗಲಭೆಗೆ ಬಳಿಕ ದೂರು ನೀಡಿದ್ದ ಇಲ್ಲಿನ ಟೌನ್ ಠಾಣೆಯ ಪಿಎಸ್ಐ ಬಿ.ಜೆ.ರವಿ ಅವರನ್ನು ಅಮಾನತು ಮಾಡಿ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ಆದೇಶಿಸಿದ್ದಾರೆ.
ತಾಜ್ ಮಹಲ್ ನಲ್ಲಿ ಎರಡು ಗಂಟೆಗಳು ಸಾರ್ವಜನಿಕರ ಪ್ರವೇಶ ನಿಷೇಧ: ಯಾಕೆ ಗೊತ್ತಾ!?
ಗಣೇಶ ವಿಸರ್ಜನೆ ಮಾಡುತ್ತಿದ್ದವರ ಪ್ರಚೋದನೆಯಿಂದ ಗಲಭೆ ಸೃಷ್ಟಿ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ್ದಾರೆಂದು ಪಿಎಸ್ಐ ರವಿ ಅವರನ್ನ ಅಮಾನತುಗೊಳಿಸಲಾಗಿದೆ. ಅಲ್ಲದೇ ಪಿಎಸ್ಐ ಜೊತೆಗೆ ಠಾಣೆಗೆ ಗುಪ್ತ ಮಾಹಿತಿ ಸಂಗ್ರಹ ಪೇದೆ ರಮೇಶ್ ಅವರನ್ನೂ ಅಮಾನತು ಮಾಡಲಾಗಿದೆ.