ಗದಗ: ಬಿಜೆಪಿ ಪಕ್ಷದಲ್ಲಿ ನನಗೆ ಮಾತ್ರ ಅನ್ಯಾಯವಾಗಿಲ್ಲ, ಅನೇಕರಿಗೆ ಅನ್ಯಾಯವಾಗಿದೆ ಎಂದು ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ಗದಗದಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿ ನನಗೆ ಮಾತ್ರ ಅನ್ಯಾಯವಾಗಿಲ್ಲ, ಅನೇಕರಿಗೆ ಅನ್ಯಾಯವಾಗಿದೆ. ಅವರೆಲ್ಲ ಸುಮ್ಮನೆ ಕುಳಿತುಕೊಂಡಿದ್ದಾರೆ. ಆದರೆ ನಾನು ಸುಮ್ಮನೆ ಕೂರಲಿಲ್ಲ, ಅನ್ಯಾಯ ಆಗಿದಕ್ಕೆ ನಾನು ಚುನಾವಣೆಗೆ ಸ್ಪರ್ಧೆ ಮಾಡಿದ್ದೆ.
ಅದು ಕೇಂದ್ರ ನಾಯಕರಿಗೆ ಗೊತ್ತಾಗಲಿ ಎಂದು ನಾನು ಚುನಾವಣೆಗೆ ಸ್ಪರ್ಧೆ ಮಾಡಿದ್ದೆ. ಸಿ ಟಿ ರವಿ, ಪ್ರತಾಪ್ ಸಿಂಹ, ಅನಂದ ಕುಮಾರ್ ಹೆಗಡಿ ಈವರಿಗೆ ಅನ್ಯಾಯವಾಗಿದೆ. ಅವರೆಲ್ಲ ಹಿಂದುತ್ವದ ಬಗ್ಗೆ ಮಾತನಾಡಿದ್ದೇ ತಪ್ಪಾ..? ಎಂದು ಬಿಜೆಪಿಗೆ ಪ್ರಶ್ನೆ ಮಾಡಿದ್ದಾರೆ.
ಪಕ್ಷದ ಸಿದ್ದಾಂತಗಳ ವಿರುದ್ಧ ಹೋಗಿರವವರ ವಿರುದ್ಧ ನಾವು ಸಂಘಟನೆ ಮಾಡುತ್ತಿದ್ದೇವೆ. ಯಾರು ನಮ್ಮನ್ನು ಹೇಳೋವರು ಕೇಳೋರು ಇಲ್ಲ ಎನ್ನುವ ದಾಟಿಯಲ್ಲಿ ಈಗೀನ ರಾಜ್ಯಾಧ್ಯಕ್ಷರು ನಡೆದುಕೊಳ್ಳುತ್ತಿದ್ದಾರೆ. ಅವರ ವಿರುದ್ಧ ಆರ್ ಎಸ್ ಎಸ್ ಸಭೆಯಲ್ಲಿ ಟೀಕೆ ಮಾಡಿದ್ದಾರೆ.
ರಾಜ್ಯದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಪಕ್ಷ ಬೆಳೆದು ಬಂದಿದೆ. ಈಗ ಒಂದು ಕುಟುಂಬದ ಕೈಗೆ ಸಿಕ್ಕಿರುವದಿಂದ ಶಾಸಕ ಸಂಖ್ಯೆ ಕಡಿಮೆಯಾಗಿದೆ. ಇಡೀ ರಾಜ್ಯದ ಪ್ರಮುಖ ನಾಯಕರು ನೊಂದಿದ್ದಾರೆ. ಕುಟುಂಬ ರಾಜಕಾರಣ ಸರಿಯಿಲ್ಲ, ಹೊಂದಾಣಿಕೆ ರಾಜಕಾರಣಕ್ಕೆ ಪರಿಹಾರ ಕಂಡು ಹಿಡಿಯಬೇಕು ಎನ್ನುವುದು ನಮ್ಮ ಪ್ರಯತ್ನವಾಗಿದೆ ಎಂದರು.