ಬೆಂಗಳೂರು:- ಬೆಂಬಲಿಗರು ಘೋಷಣೆ ಕೂಗಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೆ ಇಲ್ಲ – ಶಾಸಕ ಕೊತ್ತೂರು ಮಂಜುನಾಥ್!
ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ ಎನ್ನುತ್ತಲೇ, ಅವರು ಐದು ವರ್ಷ ಇರ್ತಾರೋ? ಮೂರು ವರ್ಷ ವರ್ಷ ಇರ್ತಾರೋ ಗೊತ್ತಿಲ್ಲ. ನೀವು ಅದನ್ನ ಹೈಕಮಾಂಡ್ ಜೊತೆಯೇ ಕೇಳಿ ಎಂದು ಹೇಳಿಕೆ ನೀಡಿದ್ದು ಭಾರೀ ಸಂಚಲನಕ್ಕೆ ಕಾರಣವಾಗಿದೆ.
ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿಗಳು. ಇದರಲ್ಲಿ ಬೇರೆ ಯಾವುದೇ ಪ್ರಶ್ನೆ ಇಲ್ಲ. ನಾನು ಅವರ ಜೊತೆಯಲ್ಲಿ ಸಚಿವನಾಗಿ ಕೆಲಸ ಮಾಡುತ್ತೇನೆ. ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಲ್ಲ. ಬೆಂಬಲಿಗರು ಘೋಷಣೆ ಕೂಗೋದು ಸಾಮಾನ್ಯ ಅಂತಾನೂ ಜಾರಕಿಹೊಳಿ ತಿಳಿಸಿದ್ದಾರೆ.