ಬೆಂಗಳೂರು:- ಕರ್ನಾಟಕದಲ್ಲಿ ಕೊನೆಗೂ ಡೆಂಗ್ಯೂ ಹಾವಳಿ ತುಸು ಕಡಿಮೆಯಾಗಿದೆ. ಆದರೂ ಎಚ್ಚರ ತಪ್ಪದಂತೆ ಆರೋಗ್ಯ ಇಲಾಖೆ ಮುನ್ಸೂಚನೆ ಕೊಟ್ಟಿದೆ.
Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ!
ಬೆಂಗಳೂರಿನಲ್ಲಿ ಮಳೆಯ ನಂತರ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯ ಬಗ್ಗೆ ಎಚ್ಚರದಿಂದಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಟ್ಟುನಿಟ್ಟಾದ ಕ್ರಮಗಳನ್ನು ಮುಂದುವರಿಸಿದೆ ಎಂದು ಇಲಾಖೆಯ ಆಯುಕ್ತ ಶಿವಕುಮಾರ್ ಕೆಬಿ ತಿಳಿಸಿದ್ದಾರೆ.
ಪ್ರತಿ ತಿಂಗಳ ಮೊದಲ 15 ದಿನಗಳಲ್ಲಿ ಇಲಾಖೆಯ ಸ್ವಯಂಸೇವಕರು 90-95 ಲಕ್ಷ ಕುಟುಂಬಗಳನ್ನು ಒಳಗೊಂಡಂತೆ ಪರಿಶೀಲನೆ ನಡೆಸುತ್ತಾರೆ. ಸೊಳ್ಳೆಗಳ ಸಂತಾನೋತ್ಪತ್ತಿ ಸ್ಥಳಗಳು ಸ್ವಚ್ಛತೆ ಕಾಪಾಡದ ಪ್ರದೇಶಗಳನ್ನು ಗುರುತಿಸಿ ಅಂಥವರ ಮಾಲೀಕರ ವಿರುದ್ಧ ಕ್ರಮವನ್ನೂ ಕೈಗೊಳ್ಳಲಾಗುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸೊಳ್ಳೆ ಉತ್ಪತ್ತಿ ತಾಣಗಳನ್ನು ಹೊಂದಿರುವ ಆಸ್ತಿ ಮಾಲೀಕರಿಂದ 6.5 ಲಕ್ಷ ರೂ. ಮತ್ತು ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ 35,000 ರೂ. ದಂಡವನ್ನು ಸಂಗ್ರಹಿಸಿದ್ದೇವೆ ಎಂದು ರಾಷ್ಟ್ರೀಯ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕೇಂದ್ರದ (ಎನ್ಸಿವಿಬಿಡಿಸಿ) ಉಪ ನಿರ್ದೇಶಕ ಡಾ.ಶರೀಫ್ ತಿಳಿಸಿದ್ದಾರೆ. ರಾಜ್ಯದ ಪ್ರಸ್ತುತ 12 ಹಾಟ್ಸ್ಪಾಟ್ಗಳಲ್ಲಿ ಬಿಬಿಎಂಪಿಯಲ್ಲಿ ಒಂಬತ್ತು, ಕಲಬುರಗಿಯಲ್ಲಿ ಎರಡು ಮತ್ತು ರಾಯಚೂರಿನಲ್ಲಿ ಒಂದು ಹಾಟ್ಸ್ಪಾಟ್ ಸೇರಿವೆ ಎಂದು ಅವರು ತಿಳಿಸಿದ್ದಾರೆ.