ತುಮಕೂರು: ಹಾಸನ ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾನು ಅಲ್ಲಿಗೆ ಹೋಗಿರದಿದ್ದರೆ 50 ವರ್ಷ ಕಳೆದರೂ ಈ ಭಾಗಕ್ಕೆ ಎತ್ತಿನಹೊಳೆ ನೀರು ಹರಿಯುತ್ತಿರಲಿಲ್ಲ ಎಂದು ಸಹಕಾರ ಸಚಿವ ಕೆ. ಎನ್. ರಾಜಣ್ಣ ತಿಳಿಸಿದರು. ಮಾತನಾಡಿದ ಅವರು, ಅಲ್ಲಿನ ರಾಜಕೀಯ ಪರಿಸ್ಥಿತಿಯೇ ಬೇರೆ ರೀತಿ ಇದೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವನಾಗಿ ಅಧಿಕಾರ ವಹಿಸಿಕೊಂಡಾಗಲೇ ಅಲ್ಲಿನ ಪರಿಸ್ಥಿತಿ ನನ್ನ ಗಮನಕ್ಕೆ ಬಂದದ್ದು. ದಕ್ಷ ಅಧಿಕಾರಿಗಳಿಗೆ ಅಲ್ಲಿ ಕೆಲಸ ಮಾಡಲು ಬಿಡುವುದೇ ಇಲ್ಲ. ಹಾಸನ ಡಿಸಿ ಸತ್ಯಭಾಮ ಅವರು ಮತ್ತು ನಾನು ಇಲ್ಲದಿದ್ದರೆ ಈ ಭಾಗಕ್ಕೆ ಎತ್ತಿನಹೊಳೆ ನೀರು ಹರಿಸಲು ಸಾಧ್ಯವಾಗುತ್ತಿರಲಿಲ್ಲ ಎಂದರು.
ನವರಾತ್ರಿಯ 7ನೇ ದಿನ “ದೇವಿ ಕಾಲರಾತ್ರಿ” ಪೂಜೆ ಮಾಡಿ ಬದುಕಿನಲ್ಲಿ ಪೂರ್ಣಪ್ರಮಾಣದ ಅಭಿವೃದ್ಧಿ ಪಡೆಯಿರಿ.!
ಡಿಸಿ ಸತ್ಯಭಾಮ ಅವರು ಎತ್ತಿನಹೊಳೆ ಯೋಜನೆಗೆ ಹೆಚ್ಚಿನ ಶ್ರಮ ವಹಿಸಿದ್ದು, ಎಂಜಿನಿಯರ್ಗಳು ಕಷ್ಟ ಪಟ್ಟು ಕೆಲಸ ಮಾಡಿದ್ದಾರೆ. ಅದಕ್ಕೆ ಬೆಲೆ ಕಟ್ಟಲು ಆಗುವುದಿಲ್ಲ. ಈಗ ನೀರು ಲಿಫ್ಟ್ ಮಾಡಲು ರೆಡಿ ಇದ್ದು, ಕಾಲುವೆಗಳ ದುರಸ್ತಿ ಆಗಬೇಕಿದೆ. ಸರಕಾರ ಕಾಲುವೆಗಳ ದುರಸ್ತಿಗೆ ಈಗಾಗಲೇ 300 ಕೋಟಿ ರೂ. ಬಿಡುಗಡೆ ಮಾಡಿದ್ದು, ಮುಂದಿನ ಮಳೆಗಾಲದ ವೇಳೆಗೆ ಮಧುಗಿರಿ, ಕೊರಟಗೆರೆಯ ಕೆರೆಗಳಿಗೆ ಎತ್ತಿನ ಹೊಳೆ ಮೂಲಕ ನೀರು ಹರಿಸಿ ಮಧುಗಿರಿ ಬರ ಪೀಡಿತ ಪ್ರದೇಶ ಎಂಬ ಹಣೆ ಪಟ್ಟಿಯನ್ನು ತೆಗೆದು ಹಾಕಬೇಕಿದೆ ಎಂದು ತಿಳಿಸಿದರು.