ಬೆಳಗಾವಿ: ಕಳೆದ ಒಂದು ವರ್ಷದಿಂದ ನನ್ನ ಗೋಳನ್ನು ಸರ್ಕಾರ ಆಲಿಸುತ್ತಿಲ್ಲ, ಹೀಗೆ ಪರಿಸ್ಥಿತಿ ಮುಂದುವರೆದ್ರೆ ನಾನು ನಾಳೆ ಹೋಗಿ ರಾಜೀನಾಮೆ ಕೊಡ್ತಿನಿ ಎಂದು ತಮ್ಮದೇ ಸರ್ಕಾರದ ವಿರುದ್ಧ ಶಾಸಕ ರಾಜು ಕಾಗೆ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರೈತರ ಪರ ಯಾವುದೇ ಯೋಜನೆಗಳು ಬರ್ತಿಲ್ಲ. ರೈತರು ಬದುಕು ನಡೆಸುವುದು ದುಸ್ತರವಾಗಿದೆ. ತಮ್ಮದೇ ಸರ್ಕಾರದ ವಿರುದ್ಧ ಹರಿಹಾಯ್ದರು. ಅಲ್ಲದೇ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ರೈತರು ಒಂದು ವರ್ಷ ಬೆಳೆಗಳನ್ನ ಬೆಳೆಯುವುದನ್ನು ಬಿಟ್ರೇ ನೀವೇನು ತಿಂತಿರೀ?
ನವರಾತ್ರಿ 9ನೇ ದಿನ: “ಸಿದ್ಧಿದಾತ್ರಿ ದೇವಿ”ಯನ್ನು ಈ ಮಂತ್ರಗಳನ್ನು ಹೇಳುತ್ತಾ ಪೂಜಿಸಿದರೆ ಒಳ್ಳೆಯದು
ನಿಮ್ಮ ಬಳಿ ರೊಕ್ಕ, ಬಂಗಾರ ಬೆಳ್ಳಿ ಸಾಕಷ್ಟು ಇರಬಹುದು. ಆದ್ರೆ ಅದನ್ನ ತಿನ್ನೋಕಾಗುತ್ತಾ? ಮೊದಲು ರೈತರನ್ನು ಬದುಕಿಸುವ ಕೆಲಸ ಮಾಡಿ . ರೈತರು ಬದುಕಿದ್ರೆ ಮಾತ್ರ ಈ ದೇಶ ಪ್ರಗತಿ ಹೊಂದಲು ಸಾಧ್ಯವಿದೆ. ಕಳೆದ ಒಂದು ವರ್ಷದಿಂದ ನನ್ನ ಗೋಳನ್ನು ಸರ್ಕಾರ ಆಲಿಸುತ್ತಿಲ್ಲ. ಹೀಗೆ ಪರಿಸ್ಥಿತಿ ಮುಂದುವರೆದ್ರೆ ವಿಧಾನಸೌಧದಲ್ಲಿಯೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಓರ್ವ ಮಂತ್ರಿಗೆ ಹೇಳಿದ್ದೆ. ನೀನ್ಯಾಕೆ ಆತ್ಮಹತ್ಯೆ ಮಾಡಿಕೊಳ್ತಿಯಾ, ನಿನ್ನ ಕೆಲಸ ಮಾಡ್ತೇವಿ ಅಂತ ಹೇಳಿದ ಮಂತ್ರಿಗಳಿದ್ದಾರೆ ಎಂದು ಕಿಡಿಕಾರಿದರು.