ಬೆಂಗಳೂರು: ಚನ್ನಪಟ್ಟಣದಲ್ಲಿ ಈ ಬಾರಿಯೂ ಜನರು ಜೆಡಿಎಸ್ ಕೈ ಹಿಡಿಯುತ್ತಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ಬಿಡದಿ ತೋಟದ ಮನೆಯಲ್ಲಿ ಚನ್ನಪಟ್ಟಣ ಮುಖಂಡರು, ನಾಯಕರ ಸಭೆ ಬಳಿಕ ಮಾತನಾಡಿದ ಅವರು,
ಒಂದು ವಾರದಿಂದ ಕುಮಾರಸ್ವಾಮಿ ಅವರು ಚನ್ನಪಟ್ಟಣದಲ್ಲಿ 5 ಜಿಲ್ಲಾ ಪಂಚಾಯಿತಿ, ಟೌನ್ನಲ್ಲಿ ಸಭೆ ಮಾಡಿದ್ದಾರೆ. ಅನೇಕ ವರ್ಷಗಳಿಂದ ಚನ್ನಪಟ್ಟಣದಲ್ಲಿ ಜನರು ನಮ್ಮ ಪರ ನಿಂತಿದ್ದಾರೆ. ಕಾರ್ಯಕರ್ತರು ಪಕ್ಷದ ಪರ ದುಡಿಮೆ ಮಾಡಿದ್ದಾರೆ. ಈ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
Health Care: ಖಾಲಿ ಹೊಟ್ಟೆಯಲ್ಲಿ ಎಂದಿಗೂ ಈ ಆಹಾರ ಮತ್ತು ಪಾನೀಯವನ್ನು ಮುಟ್ಟಲೇಬೇಡಿ!
ಹಿಂದಿನಿಂದಲೂ ಕಾರ್ಯಕರ್ತರು ಚುನಾವಣೆ ಮಾಡಿಕೊಂಡು ಬರ್ತಿದ್ದಾರೆ. ಅವರ ಮನಸಿನ ಭಾವನೆ ಕ್ರೋಡೀಕರಿಸೋ ಕೆಲಸ ಮಾಡಿದ್ದೇವೆ. ಸಭೆ ಯಶಸ್ವಿಯಾಗಿ ಆಗಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್ನ 80 ಸಾವಿರ ಮತಗಳು ಇವೆ. ನಮಗೆ ಗೆಲ್ಲಲು, ಹೋರಾಟ ಮಾಡಲು 20-25 ಸಾವಿರ ಮತ ಮಾತ್ರಬೇಕು ಒಳ್ಳೆ ಲೀಡ್ ಕಾಣೋಕೆ. NDA ಅಭ್ಯರ್ಥಿ ಗೆಲ್ಲಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರ ಅಭಿಪ್ರಾಯ ಪಡೆಯೋ ಕೆಲಸ ಆಗಿದೆ ಎಂದರು.