ಬೆಂಗಳೂರು: ಚಾಕುವಿನಿಂದ ಇರಿದು ತಂದೆಯನ್ನೇ ಮಗ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಪೋಸ್ಟ್ ಆಫೀಸ್ ರಸ್ತೆಯಲ್ಲಿ ನಡೆದಿದೆ. ವೇಲಾಯುದನ್ (76) ಕೊಲೆಯಾದವರು. ವಿನೋದ್ ಕುಮಾರ್ ಕೊಲೆ ಮಾಡಿದ ಆರೋಪಿ. ಇವರು ಮೂಲತಃ ಕೇರಳದ ಏರಿಮಲೆಯವರು.
ಕಳೆದ ರಾತ್ರಿ ರಾತ್ರಿ ಹನ್ನೆರಡು ಗಂಟೆ ಸುಮಾರಿಗೆ ತಂದೆ ಮತ್ತು ಮಗನ ನಡುವೆ ನಡೆದ ಗಲಾಟೆ ನಡೆದಿದೆ. ಆಗ ಮಗ ವಿನೋದ್ ಮನೆಯಲ್ಲಿದ್ದ ಚಾಕು ತೆಗೆದುಕೊಂಡು ತಂದೆ ವೇಲಾಯುದನ್ ಅವರಿಗೆ ಇರಿದು ಕೊಲೆ ಮಾಡಿದ್ದಾನೆ. ವೇಲಾಯುದನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Health Care: ಖಾಲಿ ಹೊಟ್ಟೆಯಲ್ಲಿ ಎಂದಿಗೂ ಈ ಆಹಾರ ಮತ್ತು ಪಾನೀಯವನ್ನು ಮುಟ್ಟಲೇಬೇಡಿ!
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಬನ್ನೇರುಘಟ್ಟ ಪೊಲೀಸರು ಮೃತದೇಹವನ್ನ ಆನೇಕಲ್ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಿದ್ದಾರೆ. ಆರೋಪಿ ವಿನೋದ್ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.